NewsKarnataka
ಇಂಫಾಲ್: ಮಣಿಪುರದ ಬಿಷ್ಣುಪುರ ಜಿಲ್ಲೆಯಲ್ಲಿ ಶುಕ್ರವಾರ ತಡರಾತ್ರಿ ಕುಕಿ ಉಗ್ರಗಾಮಿಗಳು ನಡೆಸಿದ ಬಾಂಬ್ ದಾಳಿಯಲ್ಲಿ ಇಬ್ಬರು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಿಆರ್ಪಿಎಫ್ನ 128 ಬೆಟಾಲಿಯನ್ನ ಸಿಬ್ಬಂದಿಯನ್ನು ಬಿಷ್ಣುಪುರ ಜಿಲ್ಲೆಯ ನರನ್ಸೇನಾ ಪ್ರದೇಶದಲ್ಲಿ ನಿಯೋಜಿಸಲಾಗಿತ್ತು. ರಾತ್ರಿ 2:15ರ ಸುಮಾರಿಗೆ ಕುಕಿ ಉಗ್ರಗಾಮಿಗಳು ದಾಳಿ ನಡೆಸಿದ್ದಾರೆ ಎಂದು ಮಣಿಪುರ ಪೊಲೀಸರು ಮಾಹಿತಿ ನೀಡಿದ್ದಾರೆ.
ಈಚೆಗೆ ಇನ್ನರ್ ಮಣಿಪುರ ಲೋಕಸಭಾ ಕ್ಷೇತ್ರದ ಎರಡು ಸ್ಥಳಗಳಲ್ಲಿ ಗುಂಡಿನ ದಾಳಿ ನಡೆದ ಘಟನೆಗಳು ವರದಿಯಾಗಿದ್ದವು. ಬಿಷ್ಣುಪುರ ಜಿಲ್ಲೆಯ ಮೊಯಿರಾಂಗ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತಮ್ನಾಪೊಕ್ವಿಯಲ್ಲಿ ಶಸ್ತ್ರಸಜ್ಜಿತ ವ್ಯಕ್ತಿಗಳು ಮತಗಟ್ಟೆ ಬಳಿ ಗಾಳಿಯಲ್ಲಿ ಹಲವು ಸುತ್ತು ಗುಂಡು ಹಾರಿಸಿ ಮತದಾರರನ್ನು ಓಡಿಸಿದ್ದಾರೆ ಎಂದು ಪೊಲೀಸರು ಹೇಳಿದ್ದರು. ಪರಿಸ್ಥಿತಿ ನಿಯಂತ್ರಿಸಲು ಹೆಚ್ಚುವರಿ ಭದ್ರತಾ ಸಿಬ್ಬಂದಿ ಸ್ಥಳಕ್ಕೆ ಕರೆಸಲಾಯಿತು ಎಂದು ಅವರು ತಿಳಿಸಿದ್ದರು.
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.
This site is protected by reCAPTCHA and the Google
Privacy Policy and
Terms of Service apply.
44