ಗದಗ: ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹೈತಾಪುರ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಬಿದ್ದು ಮಹಿಳೆ ಹಾಗೂ ಮಗುವೊಂದು ಸಾವನ್ನಪ್ಪಿದ ಘಟನೆ ನಡೆದಿದೆ.
ಗೀತಾ ಹೆಸರೂರು(34) ಹಾಗೂ ಮನೋಜ್ ಕವಲೂರು(5) ಮೃತರ್ದುದೈವಿಗಳು. ಶಾಲೆ ರಜೆ ಹಿನ್ನೆಲೆ ಮನೋಜ್ ದೊಡ್ಡಮ್ಮನ ಮನೆಗೆ ಬಂದಿದ್ದಾಗ ಈ ದುರ್ಘಟನೆ ನಡೆದಿದೆ.
ತಂಗಿ ಮಗನ ಜೊತೆ ನೀರು ತರಲು ಹೋಗಿದ್ದಾಗ ಮನೋಜ್ ಕೃಷಿಹೊಂಡಕ್ಕೆ ಕಾಲು ಜಾರಿ ಬಿದ್ದಿದ್ದಾರೆ. ಈ ವೇಳೆ ರಕ್ಷಣೆಗೆ ಹೋಗಿದ್ದ ಗೀತಾ ಕೂಡ ಸಾವನ್ನಪ್ಪಿದ್ದಾರೆ.
ಈ ಕುರಿತು ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.