ಕೆ.ಆರ್ ನಗರದಿಂದ ಕಿಡ್ನಾಪ್ ಆಗಿದ್ದ ಸಂತ್ರಸ್ತೆ ಮಹಿಳೆ ರಕ್ಷಣೆ ಮಾಡಿದ ಎಸ್ಐಟಿ ಪೊಲೀಸರು. » Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್


ಮೈಸೂರು,ಮೇ,4,2024 (www.justkannada.in): ಸಂಸದ ಪ್ರಜ್ವಲ್ ರೇವಣ್ಣ ವಿರುದ್ದ  ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ  ಮೈಸೂರು ಜಿಲ್ಲೆ ಕೆಆರ್.ನಗರದಿಂದ ಕಿಡ್ನಾಪ್ ಆಗಿದ್ದ ಸಂತ್ರಸ್ತೆ ಮಹಿಳೆಯನ್ನ ಎಸ್ಐಟಿ ಪೊಲೀಸರು ರಕ್ಷಣೆ ಮಾಡಿ ಕರೆದೊಯ್ದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಕಾಳೇನಹಳ್ಳಿಯಲ್ಲಿ ಸಂತ್ರಸ್ತ ಮಹಿಳೆಯನ್ನ ಎಸ್ ಐಟಿ ಪೊಲೀಸರು ರಕ್ಷಣೆ ಮಾಡಿದ್ದಾರೆ ಎನ್ನಲಾಗಿದೆ.  ಏಪ್ರಿಲ್ 29ರಂದು ಸಂತ್ರಸ್ತೆಯನ್ನು ಅವರ ಮನೆಯಿಂದ ರೇವಣ್ಣ ಸಂಬಂಧಿ ಸತೀಶ್ ಬಾಬು ಕರೆದೊಯ್ದಿದ್ದರು. ಈ ಸಂಬಂಧ ಸಂತ್ರಸ್ತ ಮಹಿಳೆಯ ಪುತ್ರ ಕೆಆರ್ ಪೊಲೀಸ್ ಠಾಣೆಯಲ್ಲಿ ಕಿಡ್ನಾಪ್ ಪ್ರಕರಣ ದಾಖಲಿಸಿದ್ದರು.

ಇದೀಗ ಸಂತ್ರಸ್ತ ಮಹಿಳೆಯನ್ನ ಹುಣಸೂರು ತಾಲೂಕಿನ ಕಾಳೇನಳ್ಳಿಯಲ್ಲಿರುವ ರೇವಣ್ಣ ಆಪ್ತ ಸಹಾಯಕ ರಾಜಶೇಖರ್ ತೋಟದಲ್ಲಿ ಎಸ್​ಐಟಿ ಪೊಲೀಸರು ರಕ್ಷಿಸಿದ್ದು ಬೆಂಗಳೂರಿಗೆ ಕರೆದುಕೊಂಡು ಹೋಗುತ್ತಿದ್ದಾರೆ ಎನ್ನಲಾಗಿದೆ.

Key words:  SIT, rescued,  woman, kidnapped

Previous articleಟಿ.ಸಿ.ಹೆಚ್: ಪ್ರಾಥಮಿಕ ಶಾಲಾ ಶಿಕ್ಷಕರ ತರಬೇತಿಗೆ  ಅರ್ಜಿ ಆಹ್ವಾನ.

Font Awesome Icons

Leave a Reply

Your email address will not be published. Required fields are marked *