ನವದೆಹಲಿ: ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ಗೆ ಮಧ್ಯಂತರ ಜಾಮೀನು ನೀಡುವುದಕ್ಕೆ ಜಾರಿ ನಿರ್ದೇಶನಾಲಯ ಗುರುವಾರ ವಿರೋಧಿಸಿದೆ.
ಇಡಿ ಉಪ ನಿರ್ದೇಶಕಿ ಭಾನು ಪ್ರಿಯಾ ಅವರು ಸುಪ್ರೀಂಕೋರ್ಟ್ಗೆ ಅಫಿಡವಿಟ್ ಸಲ್ಲಿಸಿದ್ದು, ಸಲ್ಲಿಸಿದ ಅಫಿಡವಿಟ್ನಲ್ಲಿ, ಚುನಾವಣಾ ಪ್ರಚಾರದ ಹಕ್ಕು “ಮೂಲಭೂತವಲ್ಲ” ಎಂದು ತನಿಖಾ ಸಂಸ್ಥೆ ಹೇಳಿದೆ. ಮಧ್ಯಂತರ ಜಾಮೀನಿಗೆ ಸಂಬಂಧಿಸಿದಂತೆ ಶುಕ್ರವಾರ ಸುಪ್ರೀಂಕೋರ್ಟ್ ಮಧ್ಯಂತರ ಆದೇಶ ನೀಡುವ ಸಾಧ್ಯತೆ ಇದೆ.
ಚುನಾವಣೆಗಾಗಿ ಪ್ರಚಾರ ಮಾಡುವ ಹಕ್ಕು ಮೂಲಭೂತ, ಸಾಂವಿಧಾನಿಕ ಅಥವಾ ಕಾನೂನುಬದ್ಧ ಹಕ್ಕಲ್ಲ. ಈವರೆಗೂ ಯಾವುದೇ ರಾಜಕೀಯ ನಾಯಕನು ಚುನಾವಣಾ ಸ್ಪರ್ಧಿಸುವ ಅಭ್ಯರ್ಥಿಯಲ್ಲದಿದ್ದರೇ ಪ್ರಚಾರಕ್ಕಾಗಿ ಮಧ್ಯಂತರ ಜಾಮೀನು ಪಡೆದಿಲ್ಲ.
ಕಳೆದ ಮೂರು ವರ್ಷಗಳಲ್ಲಿ ಸುಮಾರು 123 ಚುನಾವಣೆಗಳು ನಡೆದಿವೆ ಮತ್ತು ಚುನಾವಣಾ ಪ್ರಚಾರಕ್ಕಾಗಿ ಮಧ್ಯಂತರ ಜಾಮೀನು ನೀಡಿದರೆ ಯಾವುದೇ ರಾಜಕಾರಣಿಯನ್ನು ಬಂಧಿಸಲಾಗುವುದಿಲ್ಲ ಮತ್ತು ನ್ಯಾಯಾಂಗ ಬಂಧನದಲ್ಲಿ ಇರಿಸಲಾಗುವುದಿಲ್ಲ. ಏಕೆಂದರೆ ವರ್ಷಪೂರ್ತಿ ಚುನಾವಣೆಗಳು ನಡೆಯುತ್ತವೆ ಎಂದು ಇಡಿ ತನ್ನ ಅಫಿಡವಿಟ್ ನಲ್ಲಿ ಹೇಳಿದೆ.