ಕೋಲಾರದಲ್ಲಿ ಬಿಜೆಪಿ ಶಾಸಕ ಮುನಿರತ್ನ ವಶಕ್ಕೆ ಪಡೆದ ಪೊಲೀಸರು

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಮಾಜಿ ಸಚಿವ ಮುನಿರತ್ನ ವಿರುದ್ಧ ಗುತ್ತಿಗೆದಾರ ಚೆಲುವರಾಜು ಎಂಬುವವರು ಜೀವ ಬೆದರಿಕೆ ಆರೋಪ ಮಾಡಿ ದೂರು ನೀಡಿದ್ದರು. ವೈಯಾಲಿಕಾವಲ್ ಪೊಲೀಸ್‌ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿತ್ತು.

ಜೀವ ಬೆದರಿಕೆ ಆರೋಪದ ಜೊತೆಗೆ ಶಾಸಕ ಮುನಿರತ್ನ ವಿರುದ್ಧ ವೇಲು ನಾಯ್ಕರ್​ರಿಂದ ಜಾತಿ ನಿಂದನೆ ಆರೋಪ ಕೇಳಿ ಬಂದಿತ್ತು. ಜಾತಿ ನಿಂದನೆ ಆರೋಪದಲ್ಲೂ ಮತ್ತೊಂದು ಕೇಸ್ ದಾಖಲಾಗಿದೆ. ಶಾಸಕ ಮುನಿರತ್ನ ವಿರುದ್ಧ ಜೀವ ಬೆದರಿಕೆ ಆರೋಪದಲ್ಲಿ ಗುತ್ತಿಗೆದಾರ ಚೆಲುವರಾಜು ದೂರಿನ ಆಧಾರದಲ್ಲಿ ಎಫ್​ಐಆರ್ ದಾಖಲಾಗಿತ್ತು. ಜೀವ ಬೆದರಿಕೆ ಕೇಸ್​ನಲ್ಲಿ ಎ1 – ಮುನಿರತ್ನ, ಮಾಜಿ ಸಚಿವ, ಎ2 – ವಿ.ಜಿ. ಕುಮಾರ್, ಆಪ್ತ ಸಹಾಯಕ, ಎ3 – ಅಭಿಷೇಕ್, ಸೆಕ್ಯೂರಿಟಿ, ಎ4 – ವಸಂತ್ ಕುಮಾರ್ ವಿರುದ್ಧ ಕೇಸ್ ಹಾಕಲಾಗಿದೆ.

Font Awesome Icons

Leave a Reply

Your email address will not be published. Required fields are marked *