ಶಿವಮೊಗ್ಗ: ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು ಶೋಯೆಬ್ ನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು.
ಗಲಾಟೆಯಲ್ಲಿ ಗಾಯಗೊಂಡಿದ್ದ ರೌಡಿ ಯಾಸೀನ್ ಖುರೇಷಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಇಂದು(ಮೇ.09) ಚಿಕಿತ್ಸೆ ಫಲಕಾರಿ ಆಗದೇ ಸಾವನ್ನಪ್ಪಿದ್ದಾರೆ.
ಇಂದು ಸಂಜೆ 6-15 ರಿಂದ 6-30 ಕ್ಕೆ ಆತನ ಸಾವು ಸಂಭವಿಸಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಚಿಕಿತ್ಸೆ ಫಲಕಾರಿಯಾಗದೆ ಖುರೇಶಿಯ ಸಾವಾಗಿದೆ. ಆತನಿಗೂ ಮತ್ತು ಆದಿಲ್ ಎಂಬಾತನ ನಡುವೆ ಗಲಾಟೆಯಾಗಿರುವುದಾಗಿ ತಿಳಿದು ಬಂದರೂ ಸಹ ಯಾವ ವಿಷಯಕ್ಕೆ ಗಲಾಟೆ ಎಂಬುದು ಅಧಿಕೃತವಾಗಿ ಮಾಹಿತಿ ಹೊರಬೀಳಬೇಕಿದೆ.