ಅವರನ್ನು ಶಾಸಕ ಅಶೋಕ ಮನಗೂಳಿ ಸನ್ಮಾನಿಸಿ ಮಾತನಾಡಿ, ಕಾಂಗ್ರೆಸ್ ಪಕ್ಷ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದ ಜನರಿಗೆ ಗ್ಯಾರಂಟಿ ಯೋಜನೆ ಜಾರಿ ಬಗ್ಗೆ ಕೊಟ್ಟ ಮಾತು ಉಳಿಸಿಕೊಂಡಿದೆ ಎಂದರು.
ಪಂಚ ಗ್ಯಾರಂಟಿ ಯೋಜನೆಯ ಲಾಭವನ್ನು ರಾಜ್ಯದ 1.60 ಕೋಟಿ ಫಲಾನುಭವಿಗಳು ಪಡೆದುಕೊಂಡಿದ್ದಾರೆ. ಭಾಗಮ್ಮ ದಂಪತಿ ಗೃಹಲಕ್ಷ್ಮಿ ಹಣದಿಂದ ದೇವಿಗೆ ಕಿರೀಟ ಮಾಡಿಸಿಕೊಟ್ಟಿದ್ದಾರೆ. ಅವರಿಗೆ ಅಭಿನಂದನೆಗಳು ಎಂದು ಹೇಳಿದ್ದಾರೆ.