ಚುನಾವಣಾ ಕರ್ತವ್ಯ ನಿರತ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಅಂಚೆ ಮತದಾನ

ಮಡಿಕೇರಿ: ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬಂಧಿಸಿದಂತೆ ಚುನಾವಣಾ ಕರ್ತವ್ಯ ನಿರತ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಅಂಚೆ ಸೌಲಭ್ಯ ಕೇಂದ್ರ ಸ್ಥಾಪಿಸಲು ಚುನಾವಣಾ ಆಯೋಗದಿಂದ ನಿರ್ದೇಶನ ನೀಡಲಾಗಿರುತ್ತದೆ.

ಅದರಂತೆ 21-ಮೈಸೂರು ಕೊಡಗು ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ರ ಸಂಬಂಧ 209-ವಿರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ನಮೂನೆ-12 ರಲ್ಲಿ ನೀಡಲಾದ ಅರ್ಜಿಗಳಿಗೆ ಮತ ಚಲಾಯಿಸಲು ಸೌಲಭ್ಯವನ್ನು ಒದಗಿಸಬೇಕಾಗಿರುತ್ತದೆ.

ಈ ಮತದಾರರಿಗೆ ಅನುಕೂಲವಾಗುವಂತೆ ಅಂಚೆ ಮತದಾನ ಸೌಲಭ್ಯ ಕೇಂದ್ರವನ್ನು (ಪೋಸ್ಟಲ್ ಬ್ಯಾಲೆಟ್ ಫೆಸಿಲಿಟೇಷನ್ ಸೆಂಟರ್) ವಿರಾಜಪೇಟೆ ಸಹಾಯಕ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಸ್ಥಾಪಿಸಲಾಗಿದ್ದು, ಚುನಾವಣಾ ಕರ್ತವ್ಯದಲ್ಲಿ ನಿರತರಾದ ಅಧಿಕಾರಿ/ಸಿಬ್ಬಂದಿಗಳಿಗೆ ಏಪ್ರಿಲ್, 20, ಏ. 21 ಮತ್ತು ಏಪ್ರಿಲ್, 22 ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿರಾಜಪೇಟೆ ಸಹಾಯಕ ಚುನಾವಣಾಧಿಕಾರಿ ಕಚೇರಿಯಲ್ಲಿ ಅಂಚೆ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿರುವುದರಿಂದ ಅಂಚೆ ಮತದಾರರು ತಪ್ಪದೆ ಮತ ಚಲಾಯಿಸುವಂತೆ 209 ವಿರಾಜಪೇಟೆ ವಿಧಾನಸಭಾ ಕ್ಷೇತ್ರ, 21 ಮೈಸೂರು ಲೋಕಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಅವರು ತಿಳಿಸಿದ್ದಾರೆ.

Font Awesome Icons

Leave a Reply

Your email address will not be published. Required fields are marked *