ಚೊಂಬು ಹಿಡಿದು ಕಾಂಗ್ರೆಸ್ ಪ್ರತಿಭಟನೆ: ‘ಕೈ’ ಕಾರ್ಯಕರ್ತರು ಪೊಲೀಸರ ವಶಕ್ಕೆ » Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್


ಬೆಂಗಳೂರು,ಏಪ್ರಿಲ್,20,2024 (www.justkannada.in): ಇಂದು ರಾಜ್ಯಕ್ಕೆ  ಪ್ರಧಾನಿ ಮೋದಿ ಭೇಟಿ ನೀಡುತ್ತಿರುವ ಹಿನ್ನೆಲೆ ಕೇಂದ್ರ ಸರ್ಕಾರ ರಾಜ್ಯಕ್ಕೆ ಅನ್ಯಾಯ ಮಾಡಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಇಂದು ಚೊಂಬು ಹಿಡಿದು ಪ್ರತಿಭಟನೆ ನಡೆಸಿದರು.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರಕ್ಕಾಗಿ ಇಂದು ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ, ಪ್ರಧಾನಿ ಮೋದಿ ರಾಜ್ಯಕ್ಕೆ ಆಗಮಿಸುತ್ತಿರುವ ಹೊತ್ತಲ್ಲೇ ಮೋದಿ ವಿರುದ್ದ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ.

ಬೆಂಗಳೂರಿನ ಮೇಖ್ರಿ ಸರ್ಕಲ್ ನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಚೊಂಬು ಹಿಡಿದು ಪ್ರತಿಭಟನೆ ನಡೆಸಿದರು. ಪ್ರಧಾನಿ ಮೋದಿ ವಿರುದ್ಧ ಹಾಗೂ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದರು.

Key words: Congress, protest, against, Modi

Previous articleಇಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ: ಮೈತ್ರಿ ಅಭ್ಯರ್ಥಿಗಳ ಪರ ಪ್ರಚಾರ.  

Font Awesome Icons

Leave a Reply

Your email address will not be published. Required fields are marked *