ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನೀರಿನ ಟ್ಯಾಂಕ್‌ಗೆ ಬಿದ್ದು 3 ಎಂಜಿನಿಯರ್‌ಗಳು ಮೃತ್ಯು

ಬಳ್ಳಾರಿ: ನೀರಿನ ಟ್ಯಾಂಕ್‌ನಲ್ಲಿ ಬಿದ್ದು ಮೂವರು ಎಂಜಿನಿಯರ್‌ಗಳು ಸಾವಿಗೀಡಾದ ಘಟನೆ ಬಳ್ಳಾರಿ ಜಿಲ್ಲೆಯ ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನಡೆದಿದೆ.

ಮೃತರನ್ನು ಭುವನಹಳ್ಳಿಯ ಜಡೆಪ್ಪ(23), ಬೆಂಗಳೂರಿನ ಸುಶಾಂತ್(25), ಚೆನ್ನೈನ ಶಿವಮಹದೇವ(23) ಎಂದು ಗುರುತಿಸಲಾಗಿದೆ. ಪೈಪ್‌ ಜೋಡಣೆ ಕೆಲಸ ಪರಿಶೀಲನೆ ಮಾಡುತ್ತಿದ್ದಾಗ ಬೃಹತ್‌ ಪೈಪ್‌ನಲ್ಲಿ ಇದ್ದಕ್ಕಿದ್ದಂತೆ ಬಂದ ನೀರಿನಲ್ಲಿ ಕೊಚ್ಚಿಹೋಗಿ ದೊಡ್ಡ ನೀರಿನ ಟ್ಯಾಂಕ್‌ನಲ್ಲಿ ಬಿದ್ದು ಮೃತಪಟ್ಟಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.

ಸಂಡೂರು ಡಿವೈಎಸ್ಪಿ ಪ್ರಸಾದ್ ಗೋಖಲೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಗುರುವಾರ ಸಂಜೆ ಘಟನೆ ನಡೆದಿದೆ. ಇದು ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳದೆ ಹೋದ ಪರಿಣಾಮವೇ, ಆಕಸ್ಮಿಕವೇ ಅಥವಾ ಇದರ ಹಿಂದೆ ಒಳಸಂಚು ಇದೆಯೇ ಎಂಬ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ ಎಂಬ ಮಾಹಿತಿ ತಿಳಿದು ಬಂದಿದೆ.

Font Awesome Icons

Leave a Reply

Your email address will not be published. Required fields are marked *