ಉಡುಪಿ: ಚನ್ನಪಟ್ಟಣ ಉಪಚುನಾವಣೆಯ ಟಿಕೆಟ್ ಡಿಕೆ ಸುರೇಶ್ ಅವರಿಗೆ ಸಿಗಬೇಕೆಂದು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಚನ್ನಪಟ್ಟಣ ಮಾಜಿ ಶಾಸಕ ಎಂಸಿ ಅಶ್ವಥ್ ಮುಂದಾಳತ್ವದಲ್ಲಿ ಡಿಕೆ ಸುರೇಶ್ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಬೆಂಬಲಿಗರು ವಿಶೇಷ ಪೂಜೆ, ಸರ್ವಾಲಂಕಾರ ಸೇವೆ ಸಲ್ಲಿಸಲಾಯಿತು.
ಪೂಜೆಯ ಬಳಿಕ ಮಾತನಾಡಿದ ಮಾಜಿ ಶಾಸಕ ಎಂಸಿ ಅಶ್ವಥ್ ಅವರು, ಡಿಕೆ ಸುರೇಶ್ ಅವರಿಗೆ ಟಿಕೆಟ್ ಸಿಗಬೇಕು ಎಂದು ದೇವರಲ್ಲಿ ಪ್ರಾರ್ಥಿಸಿದ್ದೇವೆ. ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಅವರಿಗೆ ಹೆಚ್ಚಿನ ಶಕ್ತಿಗಾಗಿ ಪೂಜೆ ಸಲ್ಲಿಕೆ ಮಾಡಿದ್ದೇವೆ ಎಂದರು.