ತಂದೆ ದೇಶಕ್ಕಾಗಿ ಹೋರಾಡಿದ ಯೋಧ, ಮಗ ರಾಮೇಶ್ವರಂ ಕೆಫೆ ಸ್ಫೋಟದ ಮಾಸ್ಟರ್ ಮೈಂಡ್

ಬೆಂಗಳೂರು: ರಾಮೇಶ್ವರಂ ಕೆಫೆ ಬ್ಲಾಸ್ಟ್ ನ ಮಾಸ್ಟರ್ ಮೈಂಡ್ ಅಬ್ದುಲ್ ಮತೀನ್ ತಾಹನನ್ನು ಎನ್ಐಎ ಅರೆಸ್ಟ್​​ ಮಾಡಿ ಪಶ್ಚಿಮ ಬಂಗಾಳದಿಂದ ವಿಚಾರಣೆಗಾಗಿ ಬೆಂಗಳೂರಿಗೆ  ಕರೆತಂದು ಆತನ ವಿಚಾರಣೆ ನಡೆಸುತ್ತಿದ್ದಾರೆ.

ಕೆಫೆ ಬ್ಲಾಸ್ಟ್ ನ ಮಾಸ್ಟರ್ ಮೈಂಡ್ ಅಬ್ದುಲ್ ಮತೀನ್ ತಾಹ ಎಂಜಿನಿಯರಿಂಗ್ ಪದವೀಧರ. ಆತನ ತಂದೆ ದೇಶಕ್ಕಾಗಿ ಹೋರಾಡಿದ ನಿವೃತ್ತ ಯೋಧ. ವರ್ಷದ ಹಿಂದೆ ಅವರು ಮೃತಪಟ್ಟಿದ್ದರು.

ಈತ ಪೋಷಕರಿಗೆ ಒಬ್ಬನೇ ಮಗನಾಗಿದ್ದನು. ತೀರ್ಥಹಳ್ಳಿಯಲ್ಲಿ ಪ್ರೌಢಶಾಲೆ ಮುಗಿಸಿ ಬೆಂಗಳೂರಲ್ಲಿ ಎಂಜಿನಿಯರಿಂಗ್ ಪದವಿ ಪಡೆದಿದ್ದನು. ಬೆಂಗಳೂರಿಗೆ ಬಂದ ವೇಳೆ ಉಗ್ರರ ಸಂಪರ್ಕಕ್ಕೆ ಬಂದಿದ್ದನು.

ಮತೀನ್​ ತಾಹ  ಐಇಡಿ ಬಾಂಬ್ ತಯಾರಿಕೆಯ ಎಕ್ಸ್’ಪರ್ಟ್ ಆಗಿದ್ದನು. ಕಳೆದ ನಾಲ್ಕು ವರ್ಷಗಳಿಂದ ನಾಪತ್ತೆಯಾಗಿದ್ದ ಈತ ವಿವಿಧ ರಾಜ್ಯಗಳಲ್ಲಿ ನಾನಾ ಹೆಸರುಗಳಿಂದ ತಲೆಮರೆಸಿಕೊಂಡಿದ್ದನು.

ಅಬ್ದುಲ್ ಮತೀನ್ ತಾಹ ಮಂಗಳೂರು ಕುಕ್ಕರ್ ಬ್ಲಾಸ್ಟ್, ರಾಮೇಶ್ವರಂ ಕೆಫೆ ಬ್ಲಾಸ್ಟ್, ಶಿವಮೊಗ್ಗ ಟ್ರಯಲ್ ಬ್ಲಾಸ್ಟ್, ಮಾಸ್ಟರ್ ಮೈಂಡ್ ಆಗಿದ್ದಾನೆ.

Font Awesome Icons

Leave a Reply

Your email address will not be published. Required fields are marked *