ದೆಹಲಿ ಪೊಲೀಸ್ ಸಿಬ್ಬಂದಿ ಸಾವು – News Karnataka Kannada (ನ್ಯೂಸ್ ಕರ್ನಾಟಕ ಕನ್ನಡ)

ನವದೆಹಲಿ: ನಗರದ ಪ್ರಗತಿ ಮೈದಾನದ ಸುಂರಗ ಮಾರ್ಗದಲ್ಲಿ ಅಪಘಾತ ಸಂಭವಿಸಿದ್ದು ದೆಹಲಿ ಪೊಲೀಸ್ ಸಿಬ್ಬಂದಿ ಸಾವನಪ್ಪಿದ್ದಾರೆ. ಅಪಘಾತದ ದೃಶ್ಯ ಕ್ಯಾಮೆರದಲ್ಲಿ ಸೆರೆಯಾಗಿದೆ. ಭಾನುವಾರದಂದು ಪ್ರಗತಿ ಮೈದಾನದ ಸುರಂಗದಲ್ಲಿ ಘಟನೆ ನಡೆದಿದ್ದು ಅಪಘಾತದಲ್ಲಿ ಸಬ್ ಇನ್ಸ್ ಪೆಕ್ಟರ್ ಎನ್.ಕೆ. ಪವಿತ್ರನ್ ಸಾವನ್ನಪ್ಪಿದರು.

ವರದಿಗಳ ಪ್ರಕಾರ, ಸಬ್ ಇನ್ಸ್ ಪೆಕ್ಟರ್ ಎನ್.ಕೆ. ಪವಿತ್ರನ್ ಅವರ ಬೈಕ್ ಜಾರಿಬಿದ್ದು ಡಿವೈಡರ್‌ನ ಇನ್ನೊಂದು ಬದಿಗೆ ಎಸೆಯಲ್ಪಟ್ಟಿದೆ. ಪ್ರಜ್ಞೆ ತಪ್ಪಿದ ಅಧಿಕಾರಿ ರಸ್ತೆಯಲ್ಲಿ ಮಲಗಿದ್ದಾಗ ವೇಗವಾಗಿ ಬರುತ್ತಿದ್ದ ಕಾರುಗಳು ನಿಧಾನವಾಗಿ ಚಲಿಸಿ ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ತಕ್ಷಣವೇ ಲೇಡಿ ಹಾರ್ಡಿಂಜ್ ಆಸ್ಪತ್ರೆಗೆ ಸಾಗಿಸಲಾಯಿತು, ಆದರೆ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು.

ಎನ್.ಕೆ. ಪವಿತ್ರನ್ ದೆಹಲಿ ಪೊಲೀಸ್‌ನ ಈಸ್ಟರ್ಮ್ ಡಿಸ್ಟ್ರಿಕ್ಟ್‌ನ ಅಪರಾಧ ತಂಡದ ಸದಸ್ಯರಾಗಿದ್ದರು ಮತ್ತು ಐ ಎಕ್ಸ್‌ಟೆನ್ಶನ್‌ನಲ್ಲಿ ವಾಸಿಸುತ್ತಿದ್ದರು. ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಇವರು ವಾಸ್ಥವವಾಗಿ ಕೇರಳ ಮೂಲದವರು ಎಂದು ವರದಿ ತಿಳಿಸಿದೆ.

Font Awesome Icons

Leave a Reply

Your email address will not be published. Required fields are marked *