ಬೆಂಗಳೂರು,ಅಕ್ಟೋಬರ್,23,2024 (www.justkannada.in): ಚನ್ನಪಟ್ಟಣ ವಿಧಾನಸಭಾ ಉಪಚುನಾವಣಾ ರಂಗೇರಿದ್ದು ಈ ಮಧ್ಯೆ ಕ್ಷಿಪ್ರ ರಾಜಕೀಯ ಬೆಳವಣಿಗೆಯಿಂದು ನಡೆದಿದೆ. ಮೈತ್ರಿ ಟಿಕೆಟ್ ಕೈತಪ್ಪುವ ಸಾಧ್ಯತೆಯಿಂದಾಗಿ ಬಿಜೆಪಿ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ ಸಿ.ಪಿ. ಯೋಗೇಶ್ವರ್ ಅವರು ಇಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಜೊತೆ ಕಾಣಿಸಿಕೊಂಡಿದ್ದು ಕಾಂಗ್ರೆಸ್ ಸೇರ್ಪಡೆಗೆ ಮುಂದಾಗಿದ್ದಾರೆ ಎನ್ನಲಾಗಿದೆ.
ಸಿ.ಪಿ. ಯೋಗೇಶ್ವರ್ ಅವರು ಇಂದು (ಅ.23) ಬೆಳಗ್ಗೆ ಡಿ.ಕೆ. ಶಿವಕುಮಾರ್ ನಿವಾಸದಲ್ಲಿ ಕಾಣಿಸಿಕೊಂಡಿದ್ದು, ಇಬ್ಬರು ಒಟ್ಟಿಗೆ ಕಾರಿನಲ್ಲಿ ಪ್ರಯಾಣಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ತೆರಳಿ ಅವರನ್ನ ಭೇಟಿಯಾಗಿದ್ದಾರೆ. ಈ ಮೂಲಕ ಸಿಪಿ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ಖಚಿತವಾಗಿದೆ.
ಅ.21ರಂದು ಹುಬ್ಬಳ್ಳಿಯಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿ ಮಾಡಿದ ಯೋಗೇಶ್ವರ್ ಅವರು ತಮ್ಮ ರಾಜೀನಾಮೆ ಪತ್ರವನ್ನು ನೀಡಿದರು.
Key words: CP Yogeshwar, join, congress, channapatna
The post ದೋಸ್ತಿ ನಾಯಕರಿಗೆ ಸೆಡ್ಡು: ‘ಕೈ’ ಸೇರ್ಪಡೆಗೆ ಮುಂದಾದ ಸಿಪಿ ಯೋಗೇಶ್ವರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.