ಬೆಂಗಳೂರು: ದ್ವಾರಕೀಶ್ ಬಗ್ಗೆ ಕಿಚ್ಚ ಸುದೀಪ್ ಅವರು ಅಪಾರ ಗೌರವ ಹೊಂದಿದ್ದಾರೆ. ‘ವಿಷ್ಣುವರ್ಧನ’ ಸಿನಿಮಾದಲ್ಲಿ ಇಬ್ಬರೂ ಒಟ್ಟಾಗಿ ನಟಿಸಿದ್ದರು. ಈಗ ದ್ವಾರಕೀಶ್ ನಮ್ಮ ಬಳಿ ಇಲ್ಲ. ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಬೆಂಗಳೂರಿನ ಟೌನ್ಹಾಲ್ ಬಳಿ ಇರುವ ರವೀಂದ್ರ ಕಲಾಕ್ಷೇತ್ರದಲ್ಲಿ ದ್ವಾರಕೀಶ್ ಅವರ ಮೃತದೇಹವನ್ನು ಇಡಲಾಗಿದೆ. ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಆಗಮಿಸಿ ಅವರ ಅಂತಿಮ ದರ್ಶನ ಪಡೆದಿದ್ದಾರೆ. ಕಿಚ್ಚ ಸುದೀಪ್ ಕೂಡ ಕಲಾಕ್ಷೇತ್ರಕ್ಕೆ ಆಗಮಿಸಿದ್ದಾರೆ. ಅವರು ದ್ವಾರಕೀಶ್ ಅವರ ಅಂತಿಮ ದರ್ಶನ ಪಡೆದು ಭಾವುಕರಾದರು. ನಟಿ ಸುಧಾರಾಣಿ, ಮಾಳವಿಕ ಅವಿನಾಶ್, ಸೇರಿದಂತೆ ಚಿತ್ರರಂಗದ ಪ್ರಮುಖರು ಅಂತಿಮ ದರ್ಶನ ಪಡೆಯುತ್ತಿದ್ದಾರೆ.