ನಾಮಪತ್ರ ವಾಪಸ್ ಪಡೆದ ದಿಂಗಾಲೇಶ್ವರ ಸ್ವಾಮೀಜಿ. » Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್


ಧಾರವಾಡ, ಏಪ್ರಿಲ್​ ,22,2024 (www.justkannada.in): ಹುಬ್ಬಳ್ಳಿ-ಧಾರವಾಡ ಲೋಕಸಭಾ ಕ್ಷೇತ್ರದಿಂದ ಪಕ್ಷೇತರವಾಗಿ  ಸ್ಪರ್ಧಿಸಿದ್ದ ಶಿರಹಟ್ಟಿಯ ಬಾಳೆಹೊಸೂರು ಫಕೀರೇಶ್ವರ ಮಠದ ಶ್ರೀ ದಿಂಗಾಲೇಶ್ವರ ಸ್ವಾಮೀಜಿ ಅವರು ನಾಮಪತ್ರವನ್ನ ವಾಪಸ್ ಪಡೆದಿದ್ದಾರೆ.

ದಿಂಗಾಲೇಶ್ವರ ಸ್ವಾಮೀಜಿ ತಮ್ಮ ಸೂಚಕಾರದ ಸಚ್ಚಿನ್​ ಪಾಟೀಲ್​ ಮತ್ತು ಅಮೃತ ಬಳ್ಳೊಳ್ಳಿ ಮೂಲಕ ನಾಮಪತ್ರ ಚುನಾವಣಾ ಆಯೋಗದಿಂದ ತರೆಸಿದ್ದಾರೆ.  ದಿಂಗಾಲೇಶ್ವ ಸ್ವಾಮೀಜಿ ಅವರು, ಕೇಂದ್ರ ಸಚಿವ ಹಾಗೂ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ಅವರನ್ನು ಸೋಲಿಸುವುದು ನನ್ನ ಗುರಿ’ ಎಂದಿದ್ದರು.

ಈ ಮೂಲಕ ದಿಂಗಾಲೇಶ್ವರ ಸ್ವಾಮೀಜಿ, ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಅವರ ವಿರುದ್ಧ ಸಮರ ಸಾರಿದ್ದರು.  ಅಭ್ಯರ್ಥಿಯನ್ನು ಬದಲಿಸುವಂತೆ ಪಟ್ಟು ಹಿಡಿದಿದ್ದರು. ಇದಕ್ಕೆ ಬಿಜೆಪಿ ಸೊಪ್ಪು ಹಾಕಲಿಲ್ಲ. ಹೀಗಾಗಿ ದಿಂಗಾಲೇಶ್ವರ ಸ್ವಾಮೀಜಿ ಪ್ರಹ್ಲಾದ್​ ಜೋಶಿ ವಿರುದ್ಧ ಹುಬ್ಬಳ್ಳಿ-ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಕಣಕ್ಕೆ ಇಳಿದಿದ್ದರು. ಇದೀಗ ದಿಂಗಾಲೇಶ್ವರ ಶ್ರೀಗಳು ನಾಮಪತ್ರ ಹಿಂಪಡೆದಿದ್ದಾರೆ.

Key words: Dingaleshwara Swamiji, withdrawn, nomination

Previous articleʼ ಕೋಳಿ ತಿನಿಸುʼ  ಪ್ರಸಾದ ನೀಡುವ ದೇವಾಲಯದಲ್ಲಿ ಇದೀಗ ಆರ್ಚಕರಿಗೆ ಆತಂಕ..!

Font Awesome Icons

Leave a Reply

Your email address will not be published. Required fields are marked *