ನಾಳೆ ಯಲ್ಲಮ್ಮ ದೇವಿ ದರ್ಶನಕ್ಕೆ ನಿರ್ಬಂಧ – News Karnataka Kannada (ನ್ಯೂಸ್ ಕರ್ನಾಟಕ ಕನ್ನಡ)

ಬೆಳಗಾವಿ: ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ನಾಳೆ ಮತದಾನ ನಡೆಯಲಿದ್ದು, ನಾಳೆ ಜಿಲ್ಲೆಯ ಸವದತ್ತಿಯ ಯಲ್ಲಮ್ಮನ ಗುಡ್ಡಕ್ಕೆ ಭಕ್ತರಿಗೆ ನಿರ್ಬಂಧ ವಿಧಿಸಲಾಗಿದೆ.

ಪ್ರತಿ ಮಂಗಳವಾರ ಲಕ್ಷಾಂತರ ಜನ ಮತದಾನ ಬಿಟ್ಟು ದೇಗುಲಕ್ಕೆ ಆಗಮಿಸುವ ಸಾಧ್ಯತೆ ಹಿನ್ನೆಲೆ ಜಿಲ್ಲಾಡಳಿತ ನಾಳೆ ಯಲ್ಲಮ್ಮ ದೇವಿ ದರ್ಶನಕ್ಕೆ ಭಕ್ತರಿಗೆ ನಿರ್ಬಂಧಿಸಲಾಗಿದೆ.

ದೇವಿಗೆ ಎಂದಿನಂತೆ ಪೂಜಾ ಕಾರ್ಯಗಳು ನಡೆಯಲಿವೆ. ನಾಳೆ ಮತದಾನ ಪ್ರಕ್ರಿಯೆಯಲ್ಲಿ ಭಾಗಿಯಾಗಿ ಮತ ಚಲಾಯಿಸಿ. ದೇವಸ್ಥಾನಕ್ಕೆ ಯಾರು ಬಾರದಂತೆ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಬಿ ಮಹೇಶ್ ಮನವಿ ಮಾಡಿಕೊಂಡಿದ್ದಾರೆ.

Font Awesome Icons

Leave a Reply

Your email address will not be published. Required fields are marked *