ನಿಲ್ಲಿಸಿದ್ದ ಗೂಡ್ಸ್ ಲಾರಿಗೆ ಕಾರು ಡಿಕ್ಕಿ: ಇಬ್ಬರಿಗೆ ಗಂಭೀರ ಗಾಯ

ಪುತ್ತೂರು: ನಿಲ್ಲಿಸಿದ್ದ ಗೂಡ್ಸ್ ಲಾರಿಗೆ ಕಾರು ಡಿಕ್ಕಿ ಹೊಡೆದು ಕಾರಿನಲ್ಲಿದ್ದ ನಾಲ್ವರು ಗಾಯಗೊಂಡು ಇಬ್ಬರು ಗಂಭೀರವಾಗಿ ಗಾಯ ಗೊಂಡಿರುವ ಘಟನೆ ಪುತ್ತೂರು ತಾಲೂಕಿನ ಮರೀಲ್ ನ ಕ್ಯಾಂಪ್ಕೋ ಚಾಕೊಲೇಟ್ ಫ್ಯಾಕ್ಟರಿ ಬಳಿ ಘಟನೆ ನಡೆದಿದೆ.

ಮುಂಭಾಗದಿಂದ ಅತೀ ವೇಗದಲ್ಲಿ ಬರುತ್ತಿದ್ದ ಬೈಕ್ ಗೆ ಸೈಡ್ ಕೊಡುವ ಸಂದರ್ಭದಲ್ಲಿ ಕಾರು ಗೂಡ್ಸ್ ಲಾರಿಗೆ  ಡಿಕ್ಕಿಯಾಗಿದೆ.

ಕಾರಿನಲ್ಲಿದ್ದ  ಕಾಸರಗೋಡು ಜಿಲ್ಲೆಯ ಪೈವಳಿಕೆ ಗ್ರಾಮದ ಸುಳ್ಳಿಮಲೆಯ  ಗುಲಾಬಿ (55), ಕೃಷ್ಣಪ್ಪ ನಾಯ್ಕ್ (60) ಇಬ್ಬರಿಗೆ ಗಂಭೀರ ಗಾಯವಾಗಿದ್ದು, ರೋಹಿಣಿ (32), ಗನ್ಯ (2) ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

ಗಂಭೀರ ಗಾಯಗೊಂಡ ದಂಪತಿಯನ್ನ ಸರ್ಕಾರಿ ಆಸ್ಪತ್ರೆಗೆ ತಂದು ಬಳಿಕ ಹೆಚ್ಚಿನ ಚಿಕಿತ್ಸೆಗೆ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣಾ ಪೊಲೀಸರು ಭೇಟಿ, ನೀಡಿ ಪರಿಶೀಲನೆ ನಡೆಸಿ ದೂರು ದಾಖಲಿಸಿಕೊಂಡಿದ್ದಾರೆ.

 

Font Awesome Icons

Leave a Reply

Your email address will not be published. Required fields are marked *