‘ನೇಹಾ ಹತ್ಯೆ’ ಖಂಡಿಸಿ ನಾಳೆ ರಾಜ್ಯಾದ್ಯಂತ ಎಬಿವಿಪಿ ಪ್ರತಿಭಟನೆ

ಹುಬ್ಬಳ್ಳಿ: ನಗರದಲ್ಲಿ ನಡೆದ ಕಾರ್ಪೊರೇಟರ್ ಪುತ್ರಿ ನೇಹಾ ಹೀರೆಮಠ ಕೊಲೆ ಖಂಡಿಸಿ ನಾಳೆ ರಾಜ್ಯಾಧ್ಯಂತ ಎಬಿವಿಪಿಯಿಂದ ಪ್ರತಿಭಟನೆಗೆ ಕರೆ ನೀಡಲಾಗಿದೆ.

ಈ ಕುರಿತಂತೆ ಸುದ್ದಿಗೋಷ್ಠಿ ನಡೆಸಿ ಮಾಹಿತಿ ಹಂಚಿಕೊಂಡ ಕರ್ನಾಟಕ ಉತ್ತರ ಪ್ರಾಂತ್ಯದ ರಾಜ್ಯ ಕಾರ್ಯದರ್ಶಿ ಸಚಿನ ಕುಳಗೇರಿ ಅವರು, ನಾಳೆ ಬೆಳಿಗ್ಗೆ 10 ಗಂಟೆಗೆ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರದ ಎದುರು ವಿದ್ಯಾರ್ಥಿಗಳ ಜೊತೆಗೆ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಗುವುದು ಎಂದರು.

ರಾಜ್ಯದಲ್ಲಿ ಈ ರೀತಿಯ ಹತ್ಯೆಗಳು ನಡೆಯಬಾರದು. ಮತ್ತೆ ಮರುಕಳಿಸದಂತೆ ಸರ್ಕಾರ ಎಚ್ಚರಿಕೆ ವಹಿಸಬೇಕು. ಹೀಗೆ ಮಾಡಿದವರನ್ನು ಎನ್ ಕೌಂಟರ್ ಮಾಡುವಂತ ಕಾನೂನು ಜಾರಿಗೊಳ್ಳಬೇಕು. ನೇಹಾ ಕೊಲೆ ಮಾಡಿದ ಆರೋಪಿಯನ್ನು ಗಲ್ಲು ಶಿಕ್ಷೆಗೆ ಒಳಪಡಿಸಬೇಕು ಎಂಬುದಾಗಿ ಸರ್ಕಾರಕ್ಕೆ ಆಗ್ರಹಿಸಲಾಗುತ್ತದೆ ಎಂದರು.

ಕಾಲೇಜಿನಲ್ಲೇ ನಡೆದಂತ ಈ ಘಟನೆಯಿಂದ ರಾಜ್ಯದ ವಿದ್ಯಾರ್ಥಿನಿಯರು ಬೆಚ್ಚಿಬಿದ್ದಿದ್ದಾರೆ. ಇದು ಲವ್ ಜಿಹಾದ್ ಎನ್ನುವುದು ಸ್ಪಷ್ಟವಾಗಿದೆ. ಫಯಾಜ್ ಪ್ರೀತಿಯನ್ನು ನೇಹಾ ನಿರಾಕರಿಸಿದ್ದಕ್ಕೆ ಕೊಲೆ ನಡೆದಿದೆ ಎಂಬುದಾಗಿ ಆರೋಪಿಸಿದರು.

Font Awesome Icons

Leave a Reply

Your email address will not be published. Required fields are marked *