ತುಮಕೂರು: ಪ್ರಜ್ವಲ್ ರೇವಣ್ಣ ನನ್ನ ಆತ್ಮೀಯ ಸ್ನೇಹಿತ. ಅಂತಹ ಸ್ವಭಾವದ ಹುಡುಗ ಅಲ್ಲ. ಪ್ರಜ್ವಲ್ ಅವರ ಮೇಲಿನ ಪ್ರಕರಣ ಸತ್ಯನೋ ಸುಳ್ಳೋ ಎಂಬುದು ತನಿಖೆ ಬಳಿಕ ತಿಳಿಯಲಿದೆ. ಎಂದು ಸಂಸದ ಜಿ.ಎಸ್ ಬಸವರಾಜ್ ಹೇಳಿದ್ದಾರೆ.
ತುಮಕೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಏನು ಗ್ರಹಚಾರವೋ, ಯಾರ ಕೈವಾಡವೋ ಗೊತ್ತಿಲ್ಲ. ಇತ್ತೀಚೆಗೆ ಈ ರೀತಿ ತೇಜೋವಧೆ ಮಾಡುವುದು ಹೆಚ್ಚಾಗಿದೆ. ಜಾರಕಿಹೊಳಿಗೂ ಕೂಡ ಪಿತೂರಿ ಮಾಡಿ ಮನೆ ಹಾಳು ಮಾಡಿ ಮಾನ ಹರಾಜು ಹಾಕಿದ್ದಾರೆ ಎಂದರು.
ಜಾರಕಿಹೋಳಿ ಪ್ರಕರಣದಲ್ಲಿ ವಿರೋಧ ಪಕ್ಷದವರೇ ಪಿತೂರಿ ಮಾಡಿದ್ದರು. ಈಗಲೂ ಕೂಡ ವಿರೋಧ ಪಕ್ಷದವರೇ ಪಿತೂರಿ ಮಾಡಿರಬಹುದು. ಒಂದು ವೇಳೆ ಮಹಿಳೆಯರಿಗೆ ಅನ್ಯಾಯ ಆಗಿದ್ದರೆ ಶಿಕ್ಷೆ ಆಗಲೇಬೇಕು ಎಂದಿದ್ದಾರೆ.
ಏನಿದು ಪ್ರಕರಣ?: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವೀಡಿಯೋಗಳು ವೈರಲ್ ಆಗುತ್ತಿದ್ದಂತೆ ಸಂತ್ರಸ್ತೆಯರು ಮಹಿಳಾ ಆಯೋಗದ ಮೊರೆ ಹೋಗಿದ್ದು, ಸರ್ಕಾರ ಪ್ರಕರಣದ ತನಿಖೆಗೆ ಎಸ್ಐಟಿ ರಚನೆ ಮಾಡಿತ್ತು. ಇದಾದ ಬೆನ್ನಲ್ಲೇ ಮಾಜಿ ಸಚಿವ ರೇವಣ್ಣ ವಿರುದ್ಧ ಸಹ ಲೈಂಗಿಕ ದೌರ್ಜನ್ಯ ಹಾಗೂ ಸಂತ್ರಸ್ತೆಯ ಅಪಹರಣದ ಆರೋಪದಡಿ ಪ್ರಕರಣ ದಾಖಲಾಗಿತ್ತು.