ಪ್ರೀತಿ ನಿರಾಕರಣೆ ಮಾಡಿದ್ದಕ್ಕೆ ಯುವತಿಯನ್ನು ಕಿಡ್ನ್ಯಾಪ್ ಮಾಡಿದ ಪ್ರೇಮಿ

ಹಾವೇರಿ: ಹಾವೇರಿಯ  ಹಳೆಯ ಪೋಸ್ಟ್ ಆಫೀಸ್ ಬಳಿ ಬಿಎಡ್ ವಿದ್ಯಾರ್ಥಿನಿಯೊಬ್ಬಳು ಪ್ರೀತಿ ನಿರಾಕರಣೆ ಮಾಡಿದ್ದಕ್ಕೆ  ಪ್ರೇಮಿಯೊಬ್ಬ ಆಕೆಯನ್ನು ಕಿಡ್ನ್ಯಾಪ್ ಮಾಡಿದ ಘಟನೆ ನಡೆದಿದೆ.

ಯುವತಿಯನ್ನು ಅಪಹರಿಸಿದ ಆರೋಪಿಯನ್ನು, ವಿಷ್ಣು ತಗಡಿನಮನಿ ಎಂದು ಗುರುತಿಸಲಾಗಿದೆ.

ಯುವತಿ ಕಾಲೇಜ್‍ಗೆ ತೆರಳುತ್ತಿದ್ದ ವೇಳೆ, ಕಾರಿನಲ್ಲಿ ಬಂದ ವಿಷ್ಣು ಆಕೆಯನ್ನು ಕಿಡ್ನ್ಯಾಪ್ ಮಾಡಿಕೊಂಡು ಹೋಗಿದ್ದಾನೆ.

ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಯುವತಿ ರಕ್ಷಣೆಗೆ ತೆರಳಿದ್ದಾರೆ. ಇದನ್ನು ಅರಿತ ಆರೋಪಿ, ಯುವತಿಯನ್ನು ಮೋಟೆಬೆನ್ನೂರು ಬಳಿ ಬಿಟ್ಟು ಎಸ್ಕೇಪ್ ಆಗಿದ್ದಾನೆ.

ಬಳಿಕ ಫೋನ್ ಟ್ರ್ಯಾಕ್ ಮಾಡಿ ಪೊಲೀಸರು ಯುವತಿಯನ್ನು ಪತ್ತೆ ಹಚ್ಚಿ ರಕ್ಷಿಸಿದ್ದಾರೆ. ಆರೋಪಿ ವಿರುದ್ಧ ಹಾವೇರಿ ನಗರ ಪೊಲೀಸ್ ಠಾಣೆಯಲ್ಲಿ ಅಪಹರಣ ಪ್ರಕರಣ ದಾಖಲಾಗಿದೆ.  ಆರೋಪಿ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

Font Awesome Icons

Leave a Reply

Your email address will not be published. Required fields are marked *