ಬಂಗರಗಾ ಹಿರೇಮಠದ ಗುರುಲಿಂಗ ಶಿವಾಚಾರ್ಯರು ನಿಧನ – News Karnataka Kannada (ನ್ಯೂಸ್ ಕರ್ನಾಟಕ ಕನ್ನಡ)

ಕಲಬುರಗಿ: ಎರಡು ಕಾರುಗಳ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಘಟನೆ ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದಲ್ಲಿ ನಡೆದಿದೆ.

ಈ ಅಪಘಾತದಲ್ಲಿ ಆಳಂದ ತಾಲೂಕಿನ ಬಂಗರಗಾ ಹಿರೇಮಠದ ಗುರುಲಿಂಗ (43) ಶಿವಾಚಾರ್ಯರು ನಿಧನರಾಗಿದ್ದಾರೆ.

ಹಾಗೂ ಅವರ ಜೊತೆಯಲ್ಲಿದ್ದ ಕಿಣ್ಣಿ ಸುಲ್ತಾನ್ ಗ್ರಾಮದ ಮಠಾಧೀಶ ಶಾಂತಲಿಂಗ ಶಿವಾಚಾರ್ಯರು ತೀವ್ರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಎದುರು ಕಾರಿನಲ್ಲಿದ್ದ ಓರ್ವನಿಗೆ ತೀವ್ರ ಗಾಯಗಳು ಆಗಿವೆ. ಆಳಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Font Awesome Icons

Leave a Reply

Your email address will not be published. Required fields are marked *