ಮಂಗಳೂರು: ಬೆಳ್ತಂಗಡಿಯ ಬಡವರ ಬಂಧು, ಮಾಜಿ ಶಾಸಕ ವಸಂತ ಬಂಗೇರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನ ಹೊಂದಿರುತ್ತಾರೆ. ಗುರುವಾರ ಮುಂಜಾನೆ ಬೆಂಗಳೂರಿನಿಂದ ಚಾರ್ಮಾಡಿ ಮೂಲಕ ಬೆಳ್ತಂಗಡಿಗೆ ಅವರ ಪಾರ್ಥಿವ ಶರೀರ ಆಗಮಿಸಲಿದೆ.
ಬೆಳಿಗ್ಗೆ 10.30 ಗಂಟೆಗೆ ಹಳೇಕೋಟೆ ಅವರ ಮನೆಯಿಂದ ತಾಲೂಕು ಕ್ರೀಡಾಂಗಣಕ್ಕೆ ಪಾರ್ಥಿವ ಶರೀರವನ್ನು ತಂದು ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಅಪರಾಹ್ನ ಬೆಳ್ತಂಗಡಿ ನಗರದಲ್ಲಿ ಪಾರ್ಥಿವ ಶರೀರದ ಅಂತಿಮ ಯಾತ್ರೆಯನ್ನು ಮೆರವಣಿಗೆಯ ಮೂಲಕ ನಡೆಸಿ ಅವರಿಗೆ ಗೌರವ ಸಲ್ಲಿಸಲಾಗುತ್ತದೆ.
ನಂತರ ಅಂತ್ಯ ಸಂಸ್ಕಾರ ಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅವರ ಹಳೇಕೋಟೆಯ ಮನೆಯ ಸಮೀಪ ನಡೆಯಲಿದೆ . ಮೃತರ ಗೌರವಾರ್ಥ ನಗರದ ಹೋಟೆಲ್, ಅಂಗಡಿ ಮುಂಗಟ್ಟುಗಳನ್ನು ಸ್ವಯಂ ಪ್ರೇರಿತ ಬಂದ್ ಮಾಡಿ ಅವರಿಗೆ ಗೌರವ ಸಲ್ಲಿಸಬೇಕು ಎಂದು ಈ ಮೂಲಕ ವಿನಂತಿಸುತ್ತಿದ್ದೇವೆ.
ಮೃತರ ಅಂತಿಮ ದರ್ಶನಕ್ಕೆ ಮುಖ್ಯ ಮಂತ್ರಿ, ಉಪ ಮುಖ್ಯ ಮಂತ್ರಿ ಸೇರಿದಂತೆ ಸಚಿವರು ಗಣ್ಯರು ಭಾಗವಹಿಸುವ ನಿರೀಕ್ಷೆ ಇದೆ ̤ಸಾರ್ವಜನಿಕರು, ಅವರ ಅಭಿಮಾನಿಗಳು, ವಿವಿಧ ಕ್ಷೇತ್ರದ ಗಣ್ಯರಿಗೆ ತಾಲೂಕು ಕ್ರೀಡಾಂಗಣ ದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಎಲ್ಲರೂ ನಮ್ಮೊಂದಿಗೆ ಸಹಕರಿಸಬೇಕಾಗಿ ವಿನಂತಿ.