ಮಂಗಳೂರು ಕಾಂಗ್ರೆಸ್- ಬಿಜೆಪಿ ಕಾರ್ಯಕರ್ತರ ನಡುವೆ ಹೊಯ್ ಕೈ

ಮಂಗಳೂರು: ಪ್ರಚಾರ ನಡೆಸುವ ವಿಚಾರವಾಗಿ ಕಾಂಗ್ರೆಸ್‌ ಬಿಜೆಪಿ ಕಾರ್ಯಕರ್ತರ ನಡುವೆ ವಾಕ್ಸಮರ ಏರ್ಪಟ ನಡೆಯೊಂದು ನಗರದಲ್ಲಿ ನಡೆದಿದೆ ನಗರದ ಉರ್ವ ಚಿಲಿಂಬಿ ಸಾಯಿ ಬಾಬಾ ಮಂದಿರದ ಬಳಿ ಪ್ರಚಾರ ನಡೆಸುವ ವಿಚಾರವಾಗಿ ವಾಗ್ವಾದ ಆರಂಭವಾಗಿದೆ. ರಾಮ ನವಮಿ ಉತ್ಸವ ನಡೆಯುತ್ತಿದ್ದ ಮಂದಿರದ ಹೊರ ಭಾಗದಲ್ಲಿರುವ ಮುಖ್ಯ ರಸ್ತೆಯಲ್ಲಿ ಬಿಜೆಪಿ ಕಾರ್ಯಕರ್ತರು ಪ್ರಚಾರ ಕೈಗೊಂಡಿದ್ದರು.

ಮಂದಿರದ ಬಳಿ ಪ್ರಚಾರ ನಡೆಸಬಾರದು ಎಂದು ಕೈ ಕಾರ್ಯಕರ್ತರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಹೊತ್ತಲ್ಲೇ ವಾಗ್ವಾದ ತಾರಕಕ್ಕೇರಿ ನೂಕು ನುಗ್ಗಲು ಹೊಯ್ ಕೈ ನಡೆಯಿತು. ಸ್ಥಳಕ್ಕೆ ಶಾಸಕ ವೇದಾವ್ಯಾಸ್ ಕಾಮತ್,ಮಿಥುನ್ ರೈ ದೌಡಿದಾಗ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಬಳಿಕ ಪೊಲೀಸರು ಗುಂಪು ಚದುರಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದರು.

 

Font Awesome Icons

Leave a Reply

Your email address will not be published. Required fields are marked *