ಚಾಮರಾಜನಗರ: ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸತ್ತೇಗಾಲ ವಿವಿಧಡೆ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ತಾಲೂಕಿನಾಧ್ಯಂತ ಶುಕ್ರವಾರ ಗುಡುಗು ಸಹಿತ ಬಾರಿ ಬಿರುಗಾಳಿ ಸಾಧಾರಣ ಮಳೆಗೆ ರೈತರ ಜಮೀನುಗಳಲ್ಲಿ ಬೆಳೆಯಲಾಗಿದ್ದ ಬಾಳೆ ಬೆಳೆ ಮತ್ತು ಮನೆಗಳ ಮೇಲ್ಚಾವಣಿ ಬಿರುಗಾಳಿಗೆ ನೆಲ ಕಚ್ಚಿತ್ತು.
ರೈತರಿಗೆ ಭಾರಿ ಬಿರುಗಾಳಿಯಿಂದ ಹಾನಿಯಾಗಿರುವ ಬೆಳೆಗಳಿಗೆ ಕಂದಾಯ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಜಂಟಿ ಸರ್ವೆ ನಡೆಸಿ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ವರದಿ ನೀಡಲು ಸೂಚನೆ ನೀಡಲಾಗುವುದು ಈಗಾಗಲೇ ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ ಹೀಗಾಗಿ ರೈತರು ತಮ್ಮ ಜಮೀನುಗಳಲ್ಲಿ ಬೆಳೆಗಳು ಹಾಳಾಗಿರುವ ಬಗ್ಗೆ ಸೂಕ್ತ ದಾಖಲಾತಿಗಳನ್ನು ಅಧಿಕಾರಿಗಳಿಗೆ ನೀಡುವ ಮೂಲಕ ಪ್ರಕೃತಿ ವಿಕೋಪದಡಿ ಸಿಗುವ ಸೂಕ್ತ ಪರಿಹಾರ ಪಡೆಯಲು ಅನುಕೂಲ ಕಲ್ಪಿಸಲಾಗುವುದು ಎಂದರು.