ಚಾಮರಾಜನಗರ: ಮಹದೇಶ್ವರ ಬೆಟ್ಟದಲ್ಲಿ ಬಸ್ ಗಳ ಕೊರತೆಯಿಂದ ತಮ್ಮ ತಮ್ಮ ಊರುಗಳಿಗೆ ತೆರಳಲು ಅನಾನುಕೂಲ ಉಂಟಾದ ಹಿನ್ನೆಲೆ ಭಕ್ತರು ದಿಢೀರ್ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಂಗಳವಾರ ಬೆಳಗ್ಗೆ ಕನಕಪುರ ಮೂಲದಿಂದ 200 ಕ್ಕೂ ಹೆಚ್ಚು ಮಂದಿ ಭಕ್ತರು ಪಾದಯಾತ್ರೆಯಲ್ಲಿ ಆಗಮಿಸಿದ್ದರು ಆದರೆ ದೇವರ ದರ್ಶನ ಪಡೆದು ನಂತರ ತಮ್ಮ ಸ್ವಗ್ರಾಮಕ್ಕೆ ವಾಪಸ್ಸಾಗಲು ಮಂಗಳವಾರ ಮುಂಜಾನೆಯಿಂದ ಸಮರ್ಪಕವಾಗಿ ಬಸ್ ಗಳಿಲ್ಲದೆ ಪರದಾಡಿದರು.
ಈ ವೇಳೆ ಬೇಸತ್ತು ಮಹದೇಶ್ವರಬೆಟ್ಟದ ಪ್ರವೇಶದ್ವಾರದ ಮುಖ್ಯ ರಸ್ತೆಯಲ್ಲಿ ವಾಹನಗಳನ್ನು ತಡೆದು ಪ್ರತಿಭಟನೆಗೆ ಮುಂದಾದಾಗ ಸ್ಥಳಕ್ಕೆ ಮಹದೇಶ್ವರ ಬೆಟ್ಟ ಪೊಲೀಸರು ಆಗಮಿಸಿ, ಪರಿಸ್ಥಿ ತಿ ನಿಯಂತ್ರಣಗೊಳಿಸುವ ಮೂಲಕ ಹೆಚ್ಚುವರಿ ಬಸ್ ಗಳ ವ್ಯವಸ್ಥೆಯನ್ನು ಕಲ್ಪಿಸಲು ಕೆ.ಎಸ್.ಆರ್.ಟಿ. ಸಿ ಅಧಿಕಾರಿಗಳಿಗೆ ತಿಳಿಸಿದರು.