ಮೃತನ ಮಗನೂ ಸೇರಿ ಮೂವರ ಬಂಧನ – News Karnataka Kannada (ನ್ಯೂಸ್ ಕರ್ನಾಟಕ ಕನ್ನಡ)

 ಶಿವಮೊಗ್ಗ : ಜಿಲ್ಲೆಯಲ್ಲಿ ಮನೆ ಕಳ್ಳತನ, ದರೋಡೆ ಕಿಂಗ್‌ ಎನಿಸಿಕೊಂಡಿದ್ದ ಸುರೇಶ್ ಅಲಿಯಾಸ್ ಮೆಂಟಲ್ ಸೂರಿ(45)ಯನ್ನ ಶಿವಮೊಗ್ಗ ಬಾಪೂಜಿನಗರದ 7ನೇ ಕ್ರಾಸ್ ನಲ್ಲಿರುವ ಶ್ರೀ ಗಂಗಾಮಸ್ಥರ ದೇವಸ್ಥಾನದ ಸಮೀಪದ ಹೋಟೆಲ್ ಬಳಿ ಭೀಕರವಾಗಿ ಹತ್ಯೆಯಾಗಿತ್ತು.

ಈ ಕೊಲೆ ಮಾಡಿದ ಹಂತಕರು ಎಸ್ಕೇಪ್ ಆಗಿದ್ದರು. ಕಳೆದ ಒಂದು ವಾರದ ಹಿಂದೆ ನಡೆದ ಕೊಲೆ ಪ್ರಕರಣವನ್ನು ಇದೀಗ ಕೋಟೆ ಪೊಲೀಸರು ಬೇಧಿಸಿದ್ದಾರೆ. ಮೃತನ ಸಂಬಂಧಿ ರಾಕೇಶ್, ಆತನ ಸ್ನೇಹಿತ ಪ್ರವೀಣ್​ ಮತ್ತು ಮೃತನ ಅಪ್ರಾಪ್ತ ಮಗ ಸೇರಿ ಮೂವರನ್ನು ಬಂಧಿಸಿದ್ದಾರೆ

Font Awesome Icons

Leave a Reply

Your email address will not be published. Required fields are marked *