ಮೈಸೂರು ದಸರಾ ಜನರ ಉತ್ಸವದಂತೆ ಆಚರಿಸಲು ಅಧಿಕಾರಿಗಳಿಗೆ ಸೂಚನೆ- ಸಿಎಂ ಸಿದ್ದರಾಮಯ್ಯ » Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್


ಮೈಸೂರು, ಸೆಪ್ಟೆಂಬರ್ 28,2024 (www.justkannada.in):  ಸಾಹಿತಿ ಹಂ.ಪ. ನಾಗರಾಜಯ್ಯ ನವರಿಂದ  ಈ ಬಾರಿಯ ಮೈಸೂರು ದಸರಾ ಉತ್ಸವವನ್ನು ಉದ್ಘಾಟಿಸಲಿದ್ದು, ದಸರಾ ಉತ್ಸವವನ್ನು ಜನರ ಉತ್ಸವದಂತೆ ಆಚರಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮೈಸೂರು ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿ ನಂತರ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ,  ಅಕ್ಟೋಬರ್, 3 ರಂದು ಚಾಮುಂಡಿ ಬೆಟ್ಟದಲ್ಲಿ ದಸರಾ ಉತ್ಸವಕ್ಕೆ ಚಾಲನೆ ನೀಡಲಾಗುವುದು. ಈ ಬಾರಿ ಹಂ.ಪ. ನಾಗರಾಜಯ್ಯ ನವರು ದಸರಾ ಉದ್ಘಾಟನೆ ನೆರವೇರಿಸಲಿದ್ದಾರೆ. ಅಂದು ದಸರಾ ಉದ್ಘಾಟನೆ, ವಸ್ತುಪ್ರದರ್ಶನ, ದಸರಾ ಕ್ರೀಡಾ ಉತ್ಸವ ಉದ್ಘಾಟನೆ , ಕುಸ್ತಿ ಪಂದ್ಯಾವಳಿ, ಸಾಂಸ್ಕೃತಿಕ ಕಾರ್ಯಕ್ರಮ, ಸಿನಿಮೋತ್ಸವ ಸೇರಿದಂತೆ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗುವುದು. ದಸರಾ ಉತ್ಸವಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಡಳಿತ ಸರ್ವ ಸಿದ್ದತೆಗಳನ್ನು ಮಾಡುತ್ತಿದ್ದಾರೆ ಎಂದರು.

ಕಾನೂನು ಲೋಪ ನಡೆಯದಂತೆ ಪೊಲೀಸರಿಗೆ ಸೂಚನೆ

ದಸರಾ ಮಹೋತ್ಸವದಲ್ಲಿ ಉತ್ತಮ ರಸ್ತೆ, ವಿದ್ಯುತ್ ಅಲಂಕಾರ ಸೇರಿದಂತೆ ಗುಣಮಟ್ಟದ ಸೌಲಭ್ಯಗಳನ್ನು ಒದಗಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ದಸರಾ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕುರಿತು ಕಟ್ಟೆಚ್ಚರ ವಹಿಸಲು ಸೂಚನೆ ನೀಡಲಾಗಿದೆ. ಇತ್ತೀಚೆಗೆ ನಾಗಮಂಗಲದ ಘಟನೆ, ಪೊಲೀಸರ ಕರ್ತವ್ಯ ಲೋಪದಿಂದ ನಡೆದಿದ್ದು, ಅನಾಹುತ ನಡೆಯುವ ಸಂಭವವಿರುತ್ತಿರಲಿಲ್ಲ. ಆ ರೀತಿಯ ಲೋಪಗಳು ದಸರಾ ಸಂದರ್ಭದಲ್ಲಿ ನಡೆಯಬಾರದೆಂದು ಸೂಚಿಸಲಾಗಿದೆ ಎಂದರು.

ಉತ್ತಮ ಮಳೆಯಿಂದಾಗಿ ತಮಿಳು ನಾಡಿಗೆ ಹೆಚ್ಚಿನ  ನೀರು ಹರಿಸಲಾಗಿದೆ

ತಮಿಳುನಾಡಿಗೆ 177.25 ಟಿಎಂಸಿ ನೀರು ಬಿಡಬೇಕಾಗಿದೆ. ರಾಜ್ಯದಲ್ಲಿ ಉತ್ತಮ ಮಳೆಯಾದ ಕಾರಣ ತಮಿಳುನಾಡಿಗೆ ಈಗಾಗಲೇ 202 ಟಿ.ಎಂ.ಸಿ ನೀರು ಬಿಡಲಾಗಿದೆ. ಕರ್ನಾಟಕ ನಿಯಮಾನುಸಾರ ಬಿಡುವ ಪ್ರಮಾಣಕ್ಕಿಂತಲೂ ಹೆಚ್ಚಿನ ಪ್ರಮಾಣವನ್ನು ತಮಿಳುನಾಡಿಗೆ ಹರಿಸಿದೆ  ಎಂದರು.

Key words: CM Siddaramaiah, celebrate, Mysore dasara, people’s festival

 

Font Awesome Icons

Leave a Reply

Your email address will not be published. Required fields are marked *