ಮೋದಿ ಪ್ರಚಾರ ಸಭೆಯ ಕರ್ತವ್ಯ ಮುಗಿಸಿ ಹಿಂದಿರುಗಿದ್ದ ಕಾನ್ಸ್ಟೇಬಲ್‌ಗೆ ಹೃದಯಾಘಾತ

ಹಾಸನ:  ಪ್ರಧಾನಿ ನರೇಂದ್ರ ಮೋದಿ ಪ್ರಚಾರ ಸಭೆಯ ಬಂದೋಬಸ್ತ್ ಕರ್ತವ್ಯ ಮುಗಿಸಿ ಮನೆಗೆ ಹಿಂದಿರುಗಿದ್ದ ಪೊಲೀಸ್ ಕಾನ್ಸ್‌ಟೇಬಲ್ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.

ಬೇಲೂರು ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್ ಸಿದ್ದಪ್ಪ (50) ಮೃತಪಟ್ಟಿದ್ದಾರೆ. ಮೈಸೂರಿನಲ್ಲಿ ಆಯೋಜನೆ ಯಾಗಿದ್ದ ಪ್ರಧಾನಮಂತ್ರಿ ನರೇಂದ್ರಮೋದಿ ಚುನಾವಣಾ ಪ್ರಚಾರ ಕಾರ್ಯಕ್ರಮದ ನಿಮಿತ್ತ ಮೈಸೂರಿಗೆ ಬಂದೋಬಸ್ತ್ ಕರ್ತವ್ಯಕ್ಕೆ ತೆರಳಿದ್ದ ಸಿದ್ದಪ್ಪ, ಮಧ್ಯರಾತ್ರಿ ಮನೆಗೆ ವಾಪಾಸ್ಸಾಗಿ ನಿದ್ರೆಗೆ ಜಾರಿದ್ದರು.

ಕುಟುಂಬದವರು ಬೆಳಗ್ಗೆ ಗಮನಿಸಿದಾಗ ಅವರು ಮೃತಪಟ್ಟಿರುವುದು ತಿಳಿದುಬಂದಿದೆ. ಕಾನ್ಸ್‌ಟೇಬಲ್ ನಿಧನಕ್ಕೆ ಎಸ್ಪಿ ಮಹಮದ್ ಸುಜೇತಾ,ಹಾಗೂ ಸ್ನೇಹಿತರು, ಸಹೋದ್ಯೋಗಿಗಳು ಕಂಬನಿ ಮಿಡಿದಿದ್ದಾರೆ.

Font Awesome Icons

Leave a Reply

Your email address will not be published. Required fields are marked *