ರಾಜಾ ವೆಂಕಟಪ್ಪ ನಾಯಕ ನಿಧನ: ಸುದ್ದಿ ತಿಳಿದು ಹೃದಯಾಘಾತದಿಂದ ಅಭಿಮಾನಿ ಸಾವು

ಯಾದಗಿರಿ: ಸುರಪುರ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ  ನಿಧನದ ಸುದ್ದಿ ತಿಳಿದು ಅವರ ಅಭಿಮಾನಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಸುರಪುರ ತಾಲೂಕಿನ ಮಂಗಳೂರು ಗ್ರಾಮದ ಹನುಮಂತ (65) ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಮೃತ ಹನುಮಂತ, ರಾಜಾ ವೆಂಕಟಪ್ಪನವರ ಪಕ್ಕಾ ಅಭಿಮಾನಿಯಾಗಿದ್ದರು. ಶಾಸಕರ ಸಾವಿನ ಸುದ್ದಿ ತಿಳಿಯುತ್ತಿದ್ದಂತೆಯೇ ಹನುಮಂತಗೂ ಸಹ ಹೃದಯಾಘಾತವಾಗಿದೆ.

ತಮ್ಮ ಕ್ಷೇತ್ರದ ಶಾಸಕರ ಸಾವಿನ ತಿಳಿಯುತ್ತಿದ್ದಂತೆಯೇ ಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರು ರಾಜಾ ವೆಂಕಟಪ್ಪ ನಾಯಕ ಅವರ ಮನೆ ಬಳಿ ಜಮಾಯಿಸಿದ್ದಾರೆ.

ರಾಜಾ ವೆಂಕಟಪ್ಪ ನಾಯಕ ನಿಧನದಿಂದಾಗಿ ಸುರಪುರ ಕ್ಷೇತ್ರದಲ್ಲಿ ನೀರವ ಮೌನ ಆವರಿಸಿದೆ. ಸುರಪುರದಲ್ಲಿ ಸ್ವಯಂಪ್ರೇರಿತರಾಗಿ ಎಲ್ಲಾ ಅಂಗಡಿ ಮುಂಗಟ್ಟು ಬಂದ್ ಮಾಡಿದ್ದಾರೆ.

ಇನ್ನು ರಾಜಾ ವೆಂಕಟಪ್ಪ ನಾಯಕ ಅವರ ಪಾರ್ಥಿವ ಶರೀರವು ಇಂದು ರಾತ್ರಿ ಸುರಪುರ ತಲುಪಲಿದ್ದು, ನಾಳೆ(ಸೋಮವಾರ) ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ.

Font Awesome Icons

Leave a Reply

Your email address will not be published. Required fields are marked *