ಬೆಂಗಳೂರು : ಕರ್ನಾಟ, ತಮಿಳುನಾಡು ಸೇರಿದಂತೆ ಹಲವು ರಾಜ್ಯಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇತ್ತೀಚಿನ ಮಾಹಿತಿ ಪ್ರಕಾರ, ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಇಂದು ಮಳೆ ಮುಂದುವರೆಯಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. .