ವರದಕ್ಷಿಣೆ ಕಿರುಕುಳದಿಂದ ಪತ್ನಿಯ ಸಾವಿಗೆ ಕಾರಣವಾದ ಪತಿಗೆ 7 ವರ್ಷ ಜೈಲು – ನ್ಯೂಸ್ ಕರ್ನಾಟಕ ಕನ್ನಡ (News Karnataka Kannada)

ದಾವಣಗೆರೆ: ವರದಕ್ಷಿಣೆ ಕಿರುಕುಳ ನೀಡಿ ಪತ್ನಿಯ ಸಾವಿಗೆ ಕಾರಣನಾದ ಪತಿಗೆ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 7 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 40 ಸಾವಿರ ರೂ. ಚನ್ನಗಿರಿ ತಾಲ್ಲೂಕಿನ ಮೆದುಗೊಂಡನಹಳ್ಳಿ ಗ್ರಾಮದ ಮಂಜುನಾಥ್ ಶಿಕ್ಷೆಗೊಳಗಾದ ಅಪರಾಧಿ.

ಪ್ರಕರಣದ ವಿವರ: ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ ಮಾರುತಿ ನಗರದ ಶೋಭಾರಾಣಿ 2020ರಲ್ಲಿ ಮೆದುಗೊಂಡನಹಳ್ಳಿಯ ಮಂಜುನಾಥ್ ಅವರನ್ನು ವಿವಾಹವಾಗಿದ್ದರು. ಮದುವೆಯ ಸಮಯದಲ್ಲಿ ಮಂಜುನಾಥ್ ಗೆ 5 ತೊಲ ಚಿನ್ನ ಮತ್ತು 15 ತೊಲೆ ಬೆಳ್ಳಿಯನ್ನು ವರದಕ್ಷಿಣೆಯಾಗಿ ನೀಡಿದ್ದೇವೆ.

ನಾವು ಮದುವೆಗೆ ₹ 3 ಲಕ್ಷ ಖರ್ಚು ಮಾಡಿದ್ದೇವೆ. ಇದಾದ ಬಳಿಕ ಮಂಜುನಾಥ್ ಮತ್ತು ಆತನ ಕುಟುಂಬದವರು ನಮ್ಮ ಮಗಳನ್ನು ಮಾನಸಿಕವಾಗಿ ಮತ್ತು ದೈಹಿಕವಾಗಿ ನಿಂದಿಸಿ, ಹೆಚ್ಚಿನ ವರದಕ್ಷಿಣೆಗೆ ಬೇಡಿಕೆ ಇಟ್ಟಿದ್ದರು. ಇದರಿಂದ ಮನನೊಂದ ನಮ್ಮ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ’ ಎಂದು ಶೋಭಾರಾಣಿ ತಾಯಿ ನಿಂಗಮ್ಮ ದೂರಿದ್ದಾರೆ. ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖಾಧಿಕಾರಿ ಡಿವೈಎಸ್ಪಿ ಪ್ರಶಾಂತ್ ಮುನ್ನೊಳ್ಳಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

 

Font Awesome Icons

Leave a Reply

Your email address will not be published. Required fields are marked *