ಬೆಂಗಳೂರು: ವಿಜಯ್ ರಾಘವೇಂದ್ರ ಹಾಗೂ ಸ್ಪಂದನಾ ದಂಪತಿಗೆ ಇಂದು (ಆಗಸ್ಟ್ 26) ವಿವಾಹ ವಾರ್ಷಿಕೋತ್ಸವ. ಆದರೆ ಆಗಸ್ಟ್ 6ರಂದು ಸ್ಪಂದನಾ ಥೈಲ್ಯಾಂಡ್ನಲ್ಲಿ ಹೃದಯಾಘಾತದಿಂದ ಮೃತಪಟ್ಟರು. ಈ ನೋವು ವಿಜಯ್ ರಾಘವೇಂದ್ರ ಅವರಿಗೆ ಎಂದಿಗೂ ಮರೆಯಾಗುವಂಥದ್ದಲ್ಲ. ವಿವಾಹ ವಾರ್ಷಿಕೋತ್ಸವ ಆಚರಿಸಲು ಪತ್ನಿಯೇ ಇಲ್ಲ ಎಂಬುದನ್ನು ನೆನೆದು ವಿಜಯ್ ಅವರು ಇನ್ಸ್ಟಾಗ್ರಾಮ್ ನಲ್ಲಿ ಭಾವುಕ ಸಾಲುಗಳನ್ನು ಬರೆದುಕೊಂಡಿದ್ದಾರೆ.
ಹಲವು ವರ್ಷಗಳ ಕಾಲ ವಿಜಯ್ ಹಾಗೂ ಸ್ಪಂದನಾ ಸಂಸಾರ ನಡೆಸಿದರು. ಇವರಿಗೆ ಶೌರ್ಯ ಹೆಸರಿನ ಮಗನಿದ್ದಾನೆ. ಇದೀಗ ಅವರು ನೋವಿನಿಂದ ಅವರು ಸ್ಪಂದನಾ ಬಗ್ಗೆ ಭಾವುಕರಾಗಿ ಸಾಲುಗಳನ್ನು ಬರೆದು ಓದಿದ್ದಾರೆ. ಈ ವಿಡಿಯೋ ವೈರಲ್ ಆಗುತ್ತಿದೆ.
“ಚಿನ್ನಾ.. ಇಣುಕು ನೋಟ ಬೀರಿ ಹೋದೆ ಬದುಕಿನ ಅಂಗಳದಲಿ
ಎಲ್ಲೆ ಮೀರಿ ಒಲವ ನೀಡಿದೆ ಎದೆಯ ಅಂತರಾಳದಲಿ
ಬದುಕನ್ನು ಕಟ್ಟಿ ಸರ್ವಸ್ವವಾದೆ
ಉಸಿರಲ್ಲಿ ಬೆರೆತು ಜೀವಂತವಾದೆ
ಮುದ್ದಾದ ನಗುವಿನಲ್ಲಿದ್ದಿದ್ದ ಶಕ್ತಿ ಪರ್ವತದಷ್ಟು
ಮರೆಯದೆ.. ತೊರೆಯದೆ ಎದೆಗೊತ್ತಿ ಪ್ರೀತಿಸುವೆ
ಶೌರ್ಯನಲ್ಲಿ ನಾನಿನ್ನ ಬಿಗಿದಪ್ಪುವಷ್ಟು..”
ವಿಜಯ್ ರಾಘವೇಂದ್ರ ಹಂಚಿಕೊಂಡಿರುವ ಈ ವಿಡಿಯೋ ನೋಡಿ ಫ್ಯಾನ್ಸ್ ಕೂಡ ಭಾವುಕರಾಗಿದ್ದಾರೆ. ವಿಜಯ್ ರಾಘವೇಂದ್ರ ಅವರಿಗೆ ಧೈರ್ಯ ತುಂಬುವ ಕೆಲಸವನ್ನು ಮಾಡುತ್ತಿದ್ದಾರೆ.