ಚಾಮರಾಜನಗರ: ರಾಮಾಪುರ ಪೊಲೀಸ್ ಠಾಣೆ ಮೇಲೆ ದಾಳಿ ಆರೋಪಿಯಾಗಿದ್ದ ಸ್ಟೆಲ್ಲಾ ಮೇರಿಗೆ ಚಾಮರಾಜನಗರ ಬಾಲ ನ್ಯಾಯ ಮಂಡಳಿ ಕ್ಲೀನ್ಚಿಟ್ ನೀಡಿದೆ. ಪಾಲಾರ್ ಬಾಂಬ್ ಸ್ಫೋಟದ ಆರೋಪಿಯೂ ಆಗಿದ್ದ ಸ್ಟೆಲ್ಲಾ ಮೇರಿಯನ್ನು ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿ ಬಾಲ ನ್ಯಾಯಮಂಡಳಿ ಆದೇಶ ಹೊರಡಿಸಿದೆ.
ಠಾಣೆ ಮೇಲಿನ ದಾಳಿ ಪ್ರಕರಣ ಸಂಬಂಧ 2020ರ ಫೆಬ್ರವರಿಯಲ್ಲಿ ಸ್ಟೆಲ್ಲಾ ಮೇರಿಯನ್ನು ಬಂಧಿಸಲಾಗಿತ್ತು. ಟಾಡಾ, ಶಸ್ತ್ರಾಸ್ತ್ರ ಕಾಯ್ದೆ, ಸ್ಫೋಟಕ ಕಾಯ್ದೆ ಸೇರಿದಂತೆ ವಿವಿಧ ಆರೋಪಗಳಡಿ ಸ್ಟೆಲ್ಲಾ ಮೇರಿಯನ್ನು ಪೊಲೀಸರು ಬಂಧಿಸಿದ್ದರು.
ಸ್ಟೆಲ್ಲಾ ಮೇರಿಯನ್ನು ವೀರಪ್ಪನ್ ಸಹಚರ ಸುಂಡವಲಿಯಾರ್ ಅಪಹರಿಸಿ ಮದುವೆಯಾಗಿದ್ದ. ಈತ ಪೊಲೀಸ್ ಎನ್ಕೌಂಟರ್ನಲ್ಲಿ ಬಲಿಯಾಗಿದ್ದ ಎಂದು ವಾದಿಸಲಾಗಿದೆ. ಸ್ಟೆಲ್ಲಾಮೇರಿಯನ್ನು ವೀರಪ್ಪನ್ ಸಹಚರ ಸುಂಡವಲಿಯಾರ್ (ಪೊಲೀಸ್ ಎನ್ಕೌಂಟರ್ನಲ್ಲಿ ಬಲಿಯಾಗಿದ್ದಾನೆ) ಎಂಬಾತ ಅಪಹರಿಸಿ ಮದುವೆಯಾಗಿದ್ದ ಎಂದು ವಾದಿಸಲಾಗಿದೆ. ವಾದ ಪುರಸ್ಕರಿಸಿದ ಬಾಲ ನ್ಯಾಯ ಮಂಡಳಿ, ಸ್ಟೆಲ್ಲಾ ಮೇರಿಯನ್ನು ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿ ಆದೇಶಿಸಿದೆ.