ಬೆಂಗಳೂರು: ರಾಜ್ಯದ 14 ಕ್ಷೇತ್ರಗಳಲ್ಲಿ ಲೋಕಸಭಾ ಚುನಾವಣೆಯ ಮತದಾನ ಮುಕ್ತಾಯವಾಗಿದೆ. ಇಂದಿನ ದಿನವೂ ಬಿರುಸಿನ ರಾಜಕೀಯ ಬೆಳವಣಿಗೆಗಳು ನಡೆದಿದ್ದು, ಬೆಂಗಳೂರು ದಕ್ಷಿಣ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರ ವಿರುದ್ಧ ಕೇಸ್ ದಾಖಲಾಗಿದೆ.
ವೋಟಿಂಗ್ ದಿನವೇ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರ ಮೇಲೆ ಗಂಭೀರ ಆರೋಪ ಕೇಳಿ ಬಂದಿದೆ. ಧರ್ಮದ ಹೆಸರಲ್ಲಿ ಮತಯಾಚನೆ ಮಾಡಿದ ಆರೋಪದಲ್ಲಿ ಚುನಾವಣಾ ಆಯೋಗ ಸಂಸದ ತೇಜಸ್ವಿ ಸೂರ್ಯ ಅವರ ಮೇಲೆ ಕೇಸ್ ದಾಖಲು ಮಾಡಿದೆ.
ಚುನಾವಣೆಯಲ್ಲಿ ಯಾವುದೇ ಒಂದು ಧರ್ಮದ ಹೆಸರಲ್ಲಿ ಮತಯಾಚನೆ ಮಾಡುವುದು ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ ಆಗುತ್ತದೆ. ಅದರಲ್ಲಿ ಸೋಷಿಯಲ್ ಮೀಡಿಯಾ Xನಲ್ಲಿ ಧರ್ಮದ ಆಧಾರದಲ್ಲಿ ಮತ ನೀಡುವಂತೆ ವಿಡಿಯೋ ಮಾಡಿರುವುದು ಅಪರಾಧವಾಗಿದೆ. ಧರ್ಮದ ಆಧಾರದಲ್ಲಿ ಮತ ಕೇಳಿದ್ದಕ್ಕೆ ತೇಜಸ್ವಿ ಸೂರ್ಯ ಅವರ ಮೇಲೆ ಚುನಾವಣಾ ಆಯೋಗ ಪ್ರಕರಣ ದಾಖಲಿಸಿ ಸೋಷಿಯಲ್ ಮೀಡಿಯಾದಲ್ಲಿ ಪ್ರಕಟ ಮಾಡಿದೆ.
Case is booked against Tejasvi Surya MP and Candidate of Bengaluru South PC on 25.04.24 at Jayanagar PS u/s 123(3) for posting a video in X handle and soliciting votes on the ground of religion.
— Chief Electoral Officer, Karnataka (@ceo_karnataka) April 26, 2024