ಬೀದರ್: ಅಶ್ಲೀಲ ವೀಡಿಯೋ ಪ್ರಕರಣ ಆರೋಪಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ವಿದೇಶದಲ್ಲಿದ್ದು, ಅವರಿಗೆ ಕ್ಲಿಯರೆನ್ಸ್ ಕೊಟ್ಟವರು ಯಾರು ಎಂಬುದರ ಕುರಿತಂತೆ ತನಿಖೆ ಆಗಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲಿಂ ಅಹ್ಮದ್ ಆಗ್ರಹಿಸಿದರು.
ಬೀದರ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ನಾಯಕರಿಗೆ ನಾಚಿಕೆಯಾಗಬೇಕು.ದೇಶದಲ್ಲಿ ದೊಡ್ಡ ಪ್ರಕರಣ ನಡೆದರೂ ಸಹ ಏಕೆ ಖಂಡಿಸಲಿಲ್ಲ? ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದ್ದೀರಿ. ಮಹಿಳೆಯರ ಮೇಲೆ ದೌರ್ಜನ ನಡೆದಾಗ ಖಂಡಿಸಬೇಕು ಎಂದು ಆಗ್ರಹಿಸಿದರು.
ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗಲು ಕ್ಲಿಯರೆನ್ಸ್ ಬೇಕಿತ್ತು. ಕ್ಲಿಯರೆನ್ಸ್ ಕೊಟ್ಟವರು ಯಾರು ಎಂಬುದರ ಬಗ್ಗೆ ತನಿಖೆಯಾಗಬೇಕು. ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಹೇಳಿದ್ದೇವೆ. ಮೋದಿ, ಅಮಿತ್ ಶಾ ಘಟನೆ ಖಂಡಿಸದಿರುವುದು ದುರ್ದೈವ ಎಂದು ಅವರು ಹೇಳಿದರು.