ಸ್ಥಳದಲ್ಲೇ ಮೂವರು ಸಾವು – News Karnataka Kannada (ನ್ಯೂಸ್ ಕರ್ನಾಟಕ ಕನ್ನಡ)

ಹುಬ್ಬಳ್ಳಿ:  ಕಾರೊಂದು ಗಣೇಶ ಟ್ರಾವೆಲ್ಸ್ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ, ಕಾರಿನಲ್ಲಿದ್ದ ಮೂವರು ಸಾವಿಗೀಡಾಗಿ, ಮತ್ತೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಅಂಚಟಗೇರಿ ಸಮೀಪದ ಕಾರವಾರ ರಸ್ತೆಯಲ್ಲಿ ನಡೆದಿದೆ.

ಆಂದ್ರದ ಕರ್ನೂಲು ಹಾಗೂ ತೆಲಂಗಾಣ ಉಪಲ್ ಜಿಲ್ಲೆಯ ನಾಲ್ವರು ಕಾರಿನಲ್ಲಿದ್ದರು. ಅವರ ಕಾರಿನಲ್ಲಿ ಮದ್ಯದ ಬಾಟಲ್‌ಗಳು ದೊರಕಿವೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಶವಗಳು ಹಾಗೂ ಗಂಭೀರವಾಗಿ ಗಾಯಗೊಂಡವನನ್ನ ಕಿಮ್ಸಗೆ ರವಾನೆ ಮಾಡಿದ್ದು, ಗಾಯಾಳುವಿಗೆ ಚಿಕಿತ್ಸೆ ಮುಂದುವರೆದಿದೆ. ಹೆಚ್ಚಿನ ಮಾಹಿತಿಗಾಗಿ ನೀರಿಕ್ಷೀಸಲಾಗಿದೆ.

Font Awesome Icons

Leave a Reply

Your email address will not be published. Required fields are marked *