ಹೃದಯಾಘಾತಕ್ಕೆ ಬಲಿಯಾದ ನವ ವಿವಾಹಿತ ಯುವಕ ಜಿತೇಶ್

ಮಂಗಳೂರು: ಯುವಕರಲ್ಲಿ ಹೃದಯಾಘಾತ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗುತ್ತಿದ್ದು, ವಿವಾಹಿತ ಯುವಕನೊರ್ವ ಮಲಗಿದ್ದಲೇ ಹೃದಯಾಘಾತದಿಂದ ಸಾವನಪ್ಪಿದ ಘಟನೆ ಉಳ್ಳಾಲ ಕೊಲ್ಯ ಕನೀರುತೋಟದಲ್ಲಿ ಮಂಗಳವಾರ ಸಂಭವಿಸಿದೆ.

ಮೃತರನ್ನು ಕನೀರುತೋಟ ನಿವಾಸಿ ಜಿತೇಶ್ (28) ಎಂದು ಗುರುತಿಸಲಾಗಿದೆ. ಜಿತೇಶ್ ಅವರು ತಡ ರಾತ್ರಿ ಪತ್ನಿಯ ಬರ್ತ್ ಡೇ ಆಚರಿಸಿ ಊಟ ಮುಗಿಸಿ ಮಲಗಿದ್ದವರು ಇಂದು ಬೆಳಿಗ್ಗೆ ಏಳದ ಕಾರಣ, ಮನೆಮಂದಿ ಪರೀಕ್ಷಿಸಿದಾಗ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. ಜಿತೇಶ್ ಮಂಗಳೂರಿನ ಕೆಟಿಎಂ ಷೋರೂಂ ಒಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

Font Awesome Icons

Leave a Reply

Your email address will not be published. Required fields are marked *