5 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಕೊಡಗು, ದಾವಣಗೆರೆ, ಚಿತ್ರದುರ್ಗ, ತುಮಕೂರು, ಬೆಂಗಳೂರು ಗ್ರಾಮಾಂತರದಲ್ಲಿ ಮುಂದಿನ ಎರಡು ದಿನಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಬೆಂಗಳೂರು, ಕರಾವಳಿ ಜಿಲ್ಲೆಯಾದ ಉತ್ತರ ಕನ್ನಡದಲ್ಲಿ ಕಳೆದ ಎರಡು ದಿನಗಳಿಂದ ಶೀತಗಾಳಿ ಬೀಸುತ್ತಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಲ್ಳಾರಿ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ವಿಜಯನಗರ, ಶಿವಮೊಗ್ಗದಲ್ಲಿ ಒಣಹವೆ ಮುಂದುವರೆದಿದೆ.

ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್​ ಹೆಚ್ಚಾಗುವ ಸಾಧ್ಯತೆ ಇದೆ.

Font Awesome Icons

Leave a Reply

Your email address will not be published. Required fields are marked *