News Kannada
ಮಂಗಳೂರು: ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ ಬಲಿಯಾದ ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಹತ್ಯೆ ಪ್ರಕರಣ ವಿಚಾರಣೆಯನ್ನು ವಿಶೇಷ ನ್ಯಾಯಾಲಯ ಮೂಲಕ ನಡೆಸಬೇಕು ಎಂದು ಒತ್ತಾಯಿಸಿ ಪ್ರಶಾಂತ್ ಪೂಜಾರಿ ಯವರ ತಾಯಿ ಯಶೋದಾ ಪೂಜಾರ್ತಿ ಹಾಗೂ ದೀಪಕ್ ರಾವ್ ಅವರ ತಾಯಿ ಪ್ರೇಮ ರಾವ್ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಮೂಲಕ ಸಿಎಂಗೆ ಮನವಿ ಮಾಡಿದ್ದಾರೆ.
2015 ರಲ್ಲಿ ಪ್ರಶಾಂತ್ ಪೂಜಾರಿಯ ಕೊಲೆಯು ನಡೆದಿದ್ದು ಹಾಗೆಯೆ 2019 ರಲ್ಲಿ ದೀಪಕ್ ರಾವ್ ಕೊಲೆಯಾಗಿದೆ. ಈ ಎರಡೂ ಪ್ರಕರಣದ ತನಿಖೆಯು ಶೀಘ್ರವಾಗಿ ನಡೆದು ಅಪರಾಧಿಗಳಿಗೆ ಶಿಕ್ಷೆಯಾಗುವುದು ಎಂಬ ನಿರೀಕ್ಷೆಯಲ್ಲಿದ್ದೆವು. ಆದರೆ ನ್ಯಾಯಾಲಯದಲ್ಲಿ ತನಿಖೆಯು ನಮ್ಮ ನಿರೀಕ್ಷೆಯಂತೆ ಶೀಘ್ರಗತಿಯಲ್ಲಿ ನಡೆಯುತ್ತಿಲ್ಲ.
ಇತ್ತೀಚೆಗೆ ನಾವು ಪತ್ರಿಕಾ ಮಾಧ್ಯಮದ ಮೂಲಕ ಗಮನಿಸಿದ ವಿಷಯವೇನಂದರೆ, ಗೌರಿ ಲಂಕೇಶ್ ಮತ್ತು ಕಲಬುರ್ಗಿ ಹತ್ಯೆ ಪ್ರಕರಣವನ್ನು ತಾವು ವಿಶೇಷ ನ್ಯಾಯಾಲಯವನ್ನು ಸ್ಥಾಪಿಸಿ ಶೀಘ್ರಗತಿಯಲ್ಲಿ ಅಪರಾಧಿಗಳಿಗೆ ಶಿಕ್ಷೆಯಾಗುವಂತೆ ಮಾಡುವುದಾಗಿ ನೀವು ಭರವಸೆ ನೀಡಿರುವುದು ಶ್ಲಾಘನೀಯವಾಗಿದೆ. ಹಾಗೆಯೇ ತಾವುಗಳು ದೀಪಕ್ ರಾವ್ ಹಾಗೂ ಪ್ರಶಾಂತ್ ಪೂಜಾರಿಯ ಕೊಲೆ ಪ್ರಕರಣವನ್ನು ವಿಶೇಷ ನ್ಯಾಯಾಲಯದ ಮೂಲಕ ತನಿಖೆ ನಡೆಸಿ ಅಪರಾಧಿಗಳನ್ನು ಶೀಘ್ರವಾಗಿ ಶಿಕ್ಷೆಗೆ ಒಳಪಡಿಸಿ ನನ್ನ ಮಗನಿಗೆ ನ್ಯಾಯ ಒದಗಿಸಿ ಕೊಡಬೇಕೆಂದು ಈ ಮೂಲಕ ಕೇಳಿಕೊಳ್ಳುತ್ತೇನೆ ಎಂದು ಸಿಎಂಗೆ ಜಿಲ್ಲಾಧಿಕಾರಿ ಮೂಲಕ ಮನವಿ ಸಲ್ಲಿಸಿದ್ದಾರೆ.
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.
This site is protected by reCAPTCHA and the Google
Privacy Policy and
Terms of Service apply.
44