ದೇವನಹಳ್ಳಿ: ಲೋಕಸಭೆ ಚುನಾವಣೆ ಹಿನ್ನೆಲೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ದೆಹಲಿಯಿಂದ ವಿಸ್ತಾರ ವಿಮಾನದಲ್ಲಿ ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ಈ ವೇಳೆ ಮಾತನಾಡಿದ ಅವರು, ಲೋಕಸಭಾ ಚುನಾವಣಾ ತಯಾರಿ ನಡೆಯುತ್ತಿದೆ. ಎಲ್ಲಾ ಲೋಕಸಭಾ ಸ್ಥಾನಗಳನ್ನ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಗೆಲ್ಲುವ ತಯಾರಿ ಮಾಡುತ್ತಿದ್ದೇವೆ. ವಿಜಯೇಂದ್ರ ನೇತೃತ್ವದಲ್ಲಿ ಅದು ಎಲ್ಲಾ ಚೆನ್ನಾಗಿ ನಡೆಯುತ್ತಿದೆ ಎಂದು ಅರುಣ್ ಸಿಂಗ್ ಹೇಳಿದರು.
ಕಾಂಗ್ರೆಸ್ ಎಲ್ಲೆಡೆ ತೃಷ್ಟಿಕರಣ ರಾಜಕೀಯ ಮಾಡುತ್ತಿದೆ. ದೇಶದಲ್ಲೆಡೆ ಜೈ ಶ್ರೀರಾಮ್ ಜೈ ಶ್ರೀರಾಮ್ ಎಂದು ಹೇಳಲಾಗುತ್ತಿದೆ. ಆದರೆ ಕಾಂಗ್ರೆಸ್ ಮಾತ್ರ ಜೈಶ್ರೀರಾಮ್ ಹೇಳುತ್ತಿಲ್ಲ. ಕಾಂಗ್ರೆಸ್ ನಾಯಕರು ತೃಷ್ಟೀಕರಣದ ರಾಜಕೀಯ ಮಾಡುವುದರಲ್ಲೇ ಇದ್ದಾರೆ ಎಂದು ಹೇಳಿದರು.