ಇಂದು ಜಾರ್ಖಂಡ್‌ ಸಿಎಂ ಚಂಪೈ ಸೊರೇನ್‌ ಬಹುಮತ ಯಾಚನೆ

Photo Credit :
News Kannada

ರಾಂಚಿ: ಜಾರ್ಖಂಡ್‌ನ ನೂತನ ಸಿಎಂ ಚಂಪೈ ಸೊರೆನ್ ಅವರ ಸರ್ಕಾರ ಇಂದು ವಿಧಾನಸಭೆಯಲ್ಲಿ ತನ್ನ ಬಹುಮತವನ್ನು ಸಾಬೀತುಪಡಿಸಬೇಕಿದೆ.  81 ಸದಸ್ಯ ಬಲದ ಜಾರ್ಖಂಡ್‌ ವಿಧಾನಸಭೆಯಲ್ಲಿ ಬಹುಮತಕ್ಕೆ ಬೇಕಾದ ಸಂಖ್ಯೆ 41. ಜಾರ್ಖಂಡ್ ಮುಕ್ತಿ ಮೋರ್ಚಾ, ಕಾಂಗ್ರೆಸ್ ಮತ್ತು ಲಾಲು ಪ್ರಸಾದ್‌ ಯಾದವ್ ಅವರ ರಾಷ್ಟ್ರೀಯ ಜನತಾ ದಳದ ಆಡಳಿತಾರೂಢ ಮೈತ್ರಿಕೂಟವು ಬಿಜೆಪಿಯಿಂದ ಯಾವುದೇ ಕಳ್ಳಬೇಟೆಯನ್ನು ತಡೆಯಲು ಕಾಂಗ್ರೆಸ್ ಆಡಳಿತವಿರುವ ತೆಲಂಗಾಣಕ್ಕೆ ತಮ್ಮ ಶಾಸಕರನ್ನು ಕಳುಹಿಸಿದೆ.

ಪ್ರತಿಪಕ್ಷಗಳು ʼಆಪರೇಷನ್ ಕಮಲ ನಡೆಯುತ್ತಿದೆʼ ಎಂದು ಆರೋಪಿಸಿವೆ. ಈ ಪ್ರಯತ್ನದಲ್ಲಿ ಕೆಲವು ಶಾಸಕರನ್ನು ಬಿಜೆಪಿ ಸಂಪರ್ಕಿಸಿದೆ ಎಂಬ ಆರೋಪಗಳಿವೆ. 81 ಸದಸ್ಯ ಬಲದ ಸದನದಲ್ಲಿ ಆಡಳಿತಾರೂಢ ಮೈತ್ರಿಕೂಟವು 47 ಶಾಸಕರನ್ನು ಹೊಂದಿದೆ. ಇಲ್ಲಿ ಬಹುಮತದ ನಂಬರ್‌ 41 ಆಗಿದೆ. ಪ್ರಸ್ತುತ 43 ಶಾಸಕರು ಚಂಪೈ ಸೊರೆನ್ ಅವರನ್ನು ಬೆಂಬಲಿಸುತ್ತಿದ್ದಾರೆ.

ಬಿಜೆಪಿ 25 ಶಾಸಕರನ್ನು ಹೊಂದಿದೆ. AJSU ಅಥವಾ ಆಲ್ ಜಾರ್ಖಂಡ್ ವಿದ್ಯಾರ್ಥಿ ಒಕ್ಕೂಟವು ಮೂವರನ್ನು ಹೊಂದಿದೆ. ಎನ್‌ಸಿಪಿ ಮತ್ತು ಎಡಪಕ್ಷಗಳು ತಲಾ ಒಬ್ಬರನ್ನು ಹೊಂದಿದ್ದು, ಮೂವರು ಸ್ವತಂತ್ರ ಶಾಸಕರಿದ್ದಾರೆ.

ಬಂಧಿತ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರು ಭಾರೀ ಷಡ್ಯಂತ್ರಕ್ಕೆ ಗುರಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಅವರಿಗೆ ವಿಶ್ವಾಸ ಮತದಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿದೆ. ಜಾರಿ ನಿರ್ದೇಶನಾಲಯದ ತೀವ್ರ ಆಕ್ಷೇಪದ ನಡುವೆಯೂ ರಾಂಚಿಯ ವಿಶೇಷ ನ್ಯಾಯಾಲಯ ಅನುಮತಿ ನೀಡಿದೆ.

ಹನಿ ಹನಿ ಕೂಡಿ ಹಳ್ಳ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

This site is protected by reCAPTCHA and the Google
Privacy Policy and
Terms of Service apply.

44

News Kannada

The most exciting, trusted and preferred news websites of Karnataka and Kannadigas around the world.

Read More Articles

Font Awesome Icons

Leave a Reply

Your email address will not be published. Required fields are marked *