ಮುಂಬೈ : ಲೋಕಸಭೆ ಚುನಾವಣೆಯಲ್ಲಿ ಹಲವಾರು ನಟ ನಟಿಯರು ಚುನಾವಣೆ ಕಣಕ್ಕಿಳಿದಿದ್ದಾರೆ. ಈಗ ಅವರ ಸಾಲಿಗೆ ಬಾಲಿವುಡ್ ನಟ ಗೋವಿಂದ ಕೂಡ ಸೇರಿದ್ದಾರೆ.
ಈಗಾಗಲೇ ರಾಜಕೀಯ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿ, ಕೆಲ ವರ್ಷಗಳಿಂದ ದೂರವಿದ್ದ ಬಾಲಿವುಡ್ ನಟ ಗೋವಿಂದ, ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಶಿವಸೇನೆ ಯನ್ನು ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ.
ಏಕನಾಥ ಶಿಂಧೆ ಅವರನ್ನೂ ಗೋವಿಂದ್ ಅವರ ಭೇಟಿ ಮಾಡಿದ್ದರು. ವಾಯವ್ಯ ಕ್ಷೇತ್ರದಿಂದ ಲೋಕಸಭೆ ಸ್ಪರ್ಧೆಗೆ ಇಳಿಯುವ ಕುರಿತು ಚರ್ಚೆ ಮಾಡಿದ್ದರು. ಆದರೆ, ಆಗ ಅದು ಅಧಿಕೃತವಾಗಿರಲಿಲ್ಲ. ಈಗ ಶಿವಸೇನೆ ಸೇರ್ಪಡೆಗೊಂಡನಂತರ ಚುನಾವಣೆಗೆ ಸ್ಪರ್ಧಿಸುವುದು ಖಚಿತ ಎಂದು ಹೇಳಲಾಗುತ್ತಿದೆ.