ಚಾಮರಾಜನಗರ : ಲೋಕಸಭೆ ಚುನಾವಣೆ ಅಂಗವಾಗಿ ಲೊಕ್ಕನಹಳ್ಳಿ ಗ್ರಾಮದಲ್ಲಿರುವ ಬಳ್ಳಾಳಗೌಡ ಭವನದಲ್ಲಿ ಆಯೋಜಿಸಲಾಗಿದ್ದ ಭಾರತೀಯ ಜನತಾ ಪಾರ್ಟಿ,ಹನೂರು ಮಂಡಲ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಸಭೆಯನ್ನುದ್ದೇಶಿಸಿ ಹನೂರು ವಿಧಾನ ಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಎಂ.ಆರ್ ಮಂಜುನಾಥ್ ರವರು ಮಾತನಾಡಿ ಮಾಜಿ ಪ್ರಧಾನ ಮಂತ್ರಿ ಎಸ್ ಡಿ ದೇವೇಗೌಡ ರವರು ಮತ್ತು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವುದರಿಂದ ನಮ್ಮ ಕ್ಷೇತ್ರದಲ್ಲೂ ಸಹ ಮೈತ್ರಿ ಅನಿವಾರ್ಯವಾಗಿದೆ ಆದ್ದರಿಂದ ಮೈತ್ರಿ ಅಭ್ಯರ್ಥಿ ಎಸ್ ಬಾಲರಾಜ್ ಅವರಿಗೆ ಹೆಚ್ಚಿನ ಮತನೀಡಿ ಗೆಲ್ಲಿಸಬೇಕೆಂದು ಕರೆ ಕೊಟ್ಟರು.