ನಿಮ್ಮದು ಪಾದಯಾತ್ರೆಯಲ್ಲ, ಪಾಪ ವಿಮೋಚನಾ ಯಾತ್ರೆ- ಡಿಸಿಎಂ ಡಿಕೆ ಶಿವಕುಮಾರ್ ಕಿಡಿ » Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್


ಮಂಡ್ಯ,ಆಗಸ್ಟ್,6,2024 (www.justkannada.in): ಮುಡಾ ಹಗರಣ ವಿರೋಧಿಸಿ ಬಿಜೆಪಿ-ಜೆಡಿಎಸ್ ನಡೆಸುತ್ತಿರುವ ಪಾದಯಾತ್ರೆ ಬಗ್ಗೆ ಟೀಕಿಸಿರುವ ಡಿಸಿಎಂ ಡಿಕೆ ಶಿವಕುಮಾರ್, ನಿಮ್ಮದು ಪಾದಯಾತ್ರೆಯಲ್ಲ, ಪಾಪ ವಿಮೋಚನಾ ಯಾತ್ರೆ ಎಂದು ಕಿಡಿಕಾರಿದರು.

ಇಂದು ಮಂಡ್ಯದಲ್ಲಿ ಆಯೋಜಿಸಿದ್ದ ‘ಜನಾಂದೋಲನ ಸಮಾವೇಶ’ವನ್ನು ಉದ್ಘಾಟಿಸಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್,  ಬಿಜೆಪಿ ಮತ್ತು ಜೆಡಿಎಸ್ ಪಾದಯಾತ್ರೆ ಮಾಡುತ್ತಿರುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ನನ್ನ ವಿರುದ್ಧ ಅಲ್ಲ. ಕಾಂಗ್ರೆಸ್‌ ಪಕ್ಷವನ್ನು 136 ಸ್ಥಾನಗಳಲ್ಲಿ ಗೆಲ್ಲಿಸಿದ ಬಡಜನರ ವಿರುದ್ಧ. ಕಾಂಗ್ರೆಸ್‌ ಸರ್ಕಾರವನ್ನ ಕಿತ್ತೊಗೆಯಲು ನಿಮ್ಮ ಹಣೆಯಲ್ಲೇ ಬರೆದಿಲ್ಲ ಎಂದು ಗುಡುಗಿದರು.

ಕೇಂದ್ರ ಸರ್ಕಾರದಿಂದ ಬೆಲೆ ಏರಿಕೆ, ಆರ್ಥಿಕ ಅಸಮಾನತೆ ಖಂಡಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾರತ್ ಜೋಡೊ ಪಾದಯಾತ್ರೆ ಮಾಡಿದ್ದರು. ಹಾಗೆಯೇ ನಾವು ಮೇಕೆದಾಟು ಯೋಜನೆಗಾಗಿ ಪಾದಯಾತ್ರೆ ಮಾಡಿದ್ದವು. ಆದರೆ ಬಿಜೆಪಿ ಮತ್ತು ಜೆಡಿಎಸ್ ನವರು ಅವರೇ ಮಾಡಿರುವ ಬ್ರಹ್ಮಾಂಡ ಭ್ರಷ್ಟಾಚಾರವನ್ನ ವಿಮರ್ಶೆ ಮಾಡಿಕೊಳ್ಳಲು ಪಾದಯಾತ್ರೆ ನಡೆಸುತ್ತಿದ್ದಾರೆ ಎಂದು ಕುಟುಕಿದರು.

Key words: bjp, jds, Padayatra, DCM, DK Shivakumar

Font Awesome Icons

Leave a Reply

Your email address will not be published. Required fields are marked *