ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ಕ್ರಮ – ನ್ಯೂಸ್ ಕರ್ನಾಟಕ ಕನ್ನಡ (News Karnataka Kannada)

ಮಂಗಳೂರು: ಕೇರಳದಲ್ಲಿ ನಿಫಾ ಬೆನ್ನಲ್ಲೇ ಮಂಗನ ಕಾಯಿಲೆ ಭೀತಿ ಉಂಟಾಗಿದ್ದು, ಕೇರಳಕ್ಕೆ ಹೊಂದಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲೀ ವಿಶೇಷ ನಿಗಾ ವಹಿಸಲು ಆರೋಗ್ಯ ಇಲಾಖೆ ನಿರ್ಧರಿಸಿದೆ.

ಆಫ್ರಿಕನ್‌ ದೇಶಗಳಲ್ಲೂ ಮಂಗನ ಕಾಯಿಲೆ ಹರಡಿದ್ದು, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಮಂಗಳೂರು ಬಂದರಿನ ಮೂಲಕ ಜಿಲ್ಲೆಗೆ ಆಗಮಿಸುವ ಪ್ರಯಾಣಿಕರನ್ನು ತಪಾಸಣೆ ನಡೆಸಲು ನಿರ್ಧರಿಸಲಾಗಿದೆ. ಪ್ರತ್ಯೇಕ ಆ್ಯಂಬುಲೆನ್ಸ್‌ ಸನ್ನದ್ಧವಾಗಿದೆ. ಮಂಗನ ಕಾಯಿಲೆ ಪೀಡಿತ ರೋಗಿಗಳ ಚಿಕಿತ್ಸೆಗೆಂದು ವೆನ್ಲಾಕ್‌ ಆಸ್ಪತ್ರೆಯಲ್ಲಿ ವಿಶೇಷ ವಾರ್ಡ್‌ ಅನ್ನು ಕಾದಿರಿಸಲಾಗಿದೆ.“ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸದ್ಯಕ್ಕೆ ಮಂಗನ ಕಾಯಿಲೆಯ ಯಾವುದೇ ಆತಂಕ ಇಲ್ಲ. ರಾಜ್ಯ ಸರಕಾರದಿಂದಲೂ ಸದ್ಯಕ್ಕೆ ಯಾವುದೇ ಸೂಚನೆ ಬಂದಿಲ್ಲ. ವಿಮಾನ ನಿಲ್ದಾಣ, ಬಂದರಿನಲ್ಲಿ ಅಂತಾರಾಷ್ಟ್ರೀಯ ಪ್ರಯಾಣಿಕರನ್ನು ನಿರಂತರ ತಪಾಸಣೆ ನಡೆಸಲಾಗುತ್ತಿದೆ. ಮುನ್ನೆಚ್ಚರಿಕೆಗೆಂದು ವೆನ್ಲಾಕ್‌ನಲ್ಲಿ ಆರು ಬೆಡ್‌ಗಳನ್ನು ಮೀಸಲಿಟ್ಟಿದ್ದೇವೆ. ಸದ್ಯದಲ್ಲೇ ವಿಶೇಷ ಸಭೆ ನಡೆಸಲಾಗುತ್ತದೆ’ ಎಂದು ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಡಾ| ತಿಮ್ಮಯ್ಯ ತಿಳಿಸಿದ್ದಾರೆ.

 

 

Font Awesome Icons

Leave a Reply

Your email address will not be published. Required fields are marked *