ಬೆಂಗಳೂರಿನಲ್ಲಿ ಯುವತಿ ಬರ್ಬರ ಹತ್ಯೆ: ಪೀಸ್ ಪೀಸ್ ಮಾಡಿ ಫ್ರಿಡ್ಜ್ ನಲ್ಲಿಟ್ಟಿದ್ದ ಹಂತಕ » Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್


ಬೆಂಗಳೂರು,ಸೆಪ್ಟಂಬರ್,21,2024 (www.justkannada.in):  ದೆಹಲಿಯ ಶ್ರದ್ಧಾವಾಕರ್ ಹತ್ಯೆ ಮಾದರಿಯಲ್ಲೇ ಬೆಂಗಳೂರಿನಲ್ಲೂ ಯುವತಿಯೊಬ್ಬಳ ಬರ್ಬರ ಕೊಲೆಯಾಗಿದೆ.

ಬೆಂಗಳೂರಿನ ವೈಯಾಲಿಕಾವಲ್ ನ ವೀರಣ್ಣ ಆಶ್ರಮದ ಬಳಿ ಈ ಘಟನೆ ನಡೆದಿದೆ. ಸುಮಾರು 25 ವರ್ಷ ವಯಸ್ಸಿನ ಯುವತಿ ಎಂಬ ಮಾಹಿತಿ ಲಭ್ಯವಾಗಿದ್ದು, ಯುವತಿ ಗುರುತು ಪತ್ತೆ ಮಾಡಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಪ್ರೀತಿ ವಿಚಾರಕ್ಕೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಕಳೆದ 10ರಿಂದ 15 ದಿನಗಳ ಹಿಂದೆ ಕೊಲೆಯಾಗರಬಹುದು ಎಂದು ಊಹಿಸಲಾಗಿದ್ದು, ಕೆಟ್ಟ ವಾಸನೆ ಬಂದ  ಹಿನ್ನೆಲೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಯುವತಿ ಹೊರ ರಾಜ್ಯದವರು ಎನ್ನಲಾಗಿದ್ದು, 3 ತಿಂಗಳ ಹಿಂದೆ ಬಾಡಿಗೆಗೆ ಬಂದಿದ್ದಳು ಎನ್ನಲಾಗಿದೆ.

ಈ ವಿಷಯ ತಿಳಿದು ಘಟನಾ ಸ್ಥಳಕ್ಕೆ ವಯಾಲಿಕಾವಲ್ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವಂತ ವೈಯಾಲಿಕಾವಲ್ ಠಾಣೆಯ ಪೊಲೀಸರು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

Key words: Bangalore, murder, women, police

Font Awesome Icons

Leave a Reply

Your email address will not be published. Required fields are marked *