ನವದೆಹಲಿ: ಹರಿಯಾಣದಲ್ಲಿನ ಚುನಾವಣಾ ಫಲಿತಾಂಶಗಳು ಅನಿರೀಕ್ಷಿತ ಮತ್ತು ಆಘಾತಕಾರಿ, ಕಾಂಗ್ರೆಸ್ ಅದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಪಕ್ಷವು ತಿಳಿಸಿದೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, ಹರಿಯಾಣದ ಫಲಿತಾಂಶಗಳು ಸಂಪೂರ್ಣವಾಗಿ ಅನಿರೀಕ್ಷಿತ, ಆಶ್ಚರ್ಯಕರವಾಗಿದೆ. ಇದು ವಾಸ್ತವಕ್ಕೆ ವಿರುದ್ಧವಾಗಿದೆ. ಇಂದು ಪ್ರಕಟವಾಗಿರುವ ಫಲಿತಾಂಶವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಮಧ್ಯಾಹ್ನದವರೆಗೆ ನಾನು ಚುನಾವಣಾ ಆಯೋಗದೊಂದಿಗೆ ಸಂಪರ್ಕದಲ್ಲಿದ್ದೆ. ನನ್ನ ದೂರುಗಳಿಗೆ ಅವರು ಉತ್ತರಿಸಿದ್ದಾರೆ. ಅವರ ಉತ್ತರಕ್ಕೆ ನಾನು ಪ್ರತಿಕ್ರಿಯಿಸಿದ್ದೇನೆ. ಹರಿಯಾಣದ ಕನಿಷ್ಠ ಮೂರು ಜಿಲ್ಲೆಗಳಲ್ಲಿ ವಿದ್ಯುನ್ಮಾನ […]
Source