ಪತ್ನಿ, ಇಬ್ಬರು ಮಕ್ಕಳನ್ನು ಸಾಯಿಸಿ ಬಳಿಕ ಕ್ಯಾಬ್​ ಚಾಲಕ ಆತ್ಮಹತ್ಯೆ!

ಬೆಂಗಳೂರು: ಕ್ಯಾಬ್​ ಚಾಲಕನೋರ್ವ ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಸಾಯಿಸಿ ಬಳಿಕ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ನಗರದಲ್ಲಿ ಬೆಳಕಿಗೆ ಬಂದಿದೆ.

ಯಲಹಂಕ ‌ತಾಲೂಕಿನ ಸಿಂಗನಾಯಕನಹಳ್ಳಿಯ ಯಡಿಯೂರಪ್ಪ ನಗರದಲ್ಲಿ ಈ ದುರ್ಘಟನೆ ನಡೆದಿದೆ. ನೇಣಿಗೆ ಕೊರಳೊಡ್ಡಿದ ಕ್ಯಾಬ್​ ಚಾಲಕನನ್ನು ಅವಿನಾಶ್ ಎಂದು ಗುರುತಿಸಲಾಗಿದೆ.

38 ವರ್ಷದ ಅವಿನಾಶ್​ ಪತ್ನಿ ಮಮತಾ (30) ಮಗಳಾದ ಅಧೀರಾ (5), ಎರಡೂವರೆ ವರ್ಷದ ಮಗ ಅಣ್ಣಯ್ಯನನ್ನು ಸಾಯಿಸಿದ್ದಾನೆ. ಅವಿನಾಶ್ ಗುಲ್ಬರ್ಗ ಮೂಲದವನಾಗಿದ್ದು, ನರಸಪ್ಪ ಎಂಬುವವರ ಬಾಡಿಗೆ ಮನೆಯಲ್ಲಿ ಕುಟುಂಬ ಸಮೇತ ವಾಸವಿದ್ದನು.

ಅವಿನಾಶ್​ ಸಹೋದರ ಉದಯ್ ಎಂಬಾತ ದೂರು ನೀಡಿದ ಹಿನ್ನೆಲೆ ಪರಿಶೀಲಿಸಿದಾಗ ನಾಲ್ವರು ನೇಣಿಗೆ ಶರಣಾದ ಪ್ರಕರಣ ಬೆಳಕಿಗೆ ಬಂದಿದೆ. ಘಟನಾ ಸ್ಥಳಕ್ಕೆ ರಾಜಾನುಕುಂಟೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪರಿಶೀಲನೆ ನಡೆಸುತ್ತಿದ್ದಾರೆ.

Font Awesome Icons

Leave a Reply

Your email address will not be published. Required fields are marked *