ಮಂಗಳೂರು: ದಸರಾ ಶೋಭಾಯಾತ್ರೆ ವೇಳೆ ವಿದ್ಯಾರ್ಥಿಗಳ ಹೊಡೆದಾಟ ನಡೆಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ವಿದ್ಯಾರ್ಥಿಗಳು ಹೊಡೆದಾಡುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಮಂಗಳೂರಿನ ಪಿವಿಎಸ್ ರಸ್ತೆಯಲ್ಲಿ ಕೇರಳ ಹಾಗೂ ಮಂಗಳೂರಿನ ವಿದ್ಯಾರ್ಥಿಗಳ ನಡುವೆ ನಡೆದ ಹೊಡೆದಾಟ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಮಾತಿಗೆ ಮಾತು ಬೆಳೆದು ವಿದ್ಯಾರ್ಥಿಗಳು ಹೊಡೆದಾಡಿಕೊಂಡಿದ್ದಾರೆ.